ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷ (ಎಎಪಿ) ಗೆದ್ದರೆ, ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ.
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಚಂಡೀಗಡಕ್ಕೆ ಮಂಗಳವಾರ ಭೇಟಿ ನೀಡಲಿದ್ದಾರೆ.
‘ನಾವು ದೆಹಲಿಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ. ಇದರಿಂದಾಗಿ ಮಹಿಳೆಯರು ಬಹಳ ಸಂತೋಷವಾಗಿದ್ದಾರೆ. ಆದರೆ ಪಂಜಾಬ್ನ ಮಹಿಳೆಯರು ಹಣದುಬ್ಬರದಿಂದಾಗಿ ಬಹಳ ಬೇಸರಗೊಂಡಿದ್ದಾರೆ’ ಎಂದು ಪಂಜಾಬಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.