<p><strong>ನವದೆಹಲಿ:</strong>‘ಸಿಂಗಪುರದಲ್ಲಿ ಕಂಡು ಬಂದಿರುವ ಕೊರೊನಾ ವೈರಸ್ ತಳಿ ಅತ್ಯಂತ ಅಪಾಯಕಾರಿ ಎಂಬುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು’ ಎಂದು ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸಿಂಗಪುರ ಜನರು ಆಗ್ರಹಿಸಿದ್ದಾರೆ.</p>.<p>‘ಸಿಂಗಪುರದಲ್ಲಿ ಕಂಡು ಬಂದಿರುವ ವೈರಸ್ನ ತಳಿ ಮೂರನೇ ಅಲೆ ರೂಪದಲ್ಲಿ ದೆಹಲಿಯನ್ನು ತಲುಪಬಹುದು. ಕೂಡಲೇ ಸಿಂಗಪುರ ಮತ್ತು ಭಾರತ ನಡುವೆ ವಿಮಾನ ಸಂಚಾರ ರದ್ದುಪಡಿಸುವಂತೆ’ ಕೇಜ್ರಿವಾಲ್ ಮಂಗಳವಾರ ಟ್ವೀಟ್ ಮಾಡಿದ್ದರು.</p>.<p>ಸಿಂಗಪುರದ ಪ್ರಮುಖ ಬ್ಲಾಗರ್ ಆಗಿರುವ ಬ್ರೌನ್ ಎಂಬುವವರು, ‘ದೆಹಲಿ ಮುಖ್ಯಮಂತ್ರಿಯವರೇ,ವೈರಸ್ನ ಬಿ.1.617 ತಳಿ ನಿಮ್ಮ ದೇಶದಿಂದಲೇ ಬಂದಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಸಿಂಗಪುರ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಸಹ ಟ್ವೀಟ್ ಮಾಡಿದ್ದು, ‘ಸಿಂಗಪುರ ತಳಿ ಎಂಬುದೇ ಇಲ್ಲ. ರಾಜಕಾರಣಿಗಳು ವಾಸ್ತವಾಂಶ ಅರಿಯಬೇಕು’ ಎಂದಿದ್ದಾರೆ. ಅಲ್ಲದೇ, ಕೇಜ್ರಿವಾಲ್ ಹೇಳಿಕೆಯಿಂದ ಉಂಟಾದ ಗೊಂದಲವನ್ನು ನಿವಾರಿಸಿದ್ದಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಧನ್ಯವಾದ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>‘ಸಿಂಗಪುರದಲ್ಲಿ ಕಂಡು ಬಂದಿರುವ ಕೊರೊನಾ ವೈರಸ್ ತಳಿ ಅತ್ಯಂತ ಅಪಾಯಕಾರಿ ಎಂಬುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು’ ಎಂದು ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸಿಂಗಪುರ ಜನರು ಆಗ್ರಹಿಸಿದ್ದಾರೆ.</p>.<p>‘ಸಿಂಗಪುರದಲ್ಲಿ ಕಂಡು ಬಂದಿರುವ ವೈರಸ್ನ ತಳಿ ಮೂರನೇ ಅಲೆ ರೂಪದಲ್ಲಿ ದೆಹಲಿಯನ್ನು ತಲುಪಬಹುದು. ಕೂಡಲೇ ಸಿಂಗಪುರ ಮತ್ತು ಭಾರತ ನಡುವೆ ವಿಮಾನ ಸಂಚಾರ ರದ್ದುಪಡಿಸುವಂತೆ’ ಕೇಜ್ರಿವಾಲ್ ಮಂಗಳವಾರ ಟ್ವೀಟ್ ಮಾಡಿದ್ದರು.</p>.<p>ಸಿಂಗಪುರದ ಪ್ರಮುಖ ಬ್ಲಾಗರ್ ಆಗಿರುವ ಬ್ರೌನ್ ಎಂಬುವವರು, ‘ದೆಹಲಿ ಮುಖ್ಯಮಂತ್ರಿಯವರೇ,ವೈರಸ್ನ ಬಿ.1.617 ತಳಿ ನಿಮ್ಮ ದೇಶದಿಂದಲೇ ಬಂದಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>ಸಿಂಗಪುರ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಸಹ ಟ್ವೀಟ್ ಮಾಡಿದ್ದು, ‘ಸಿಂಗಪುರ ತಳಿ ಎಂಬುದೇ ಇಲ್ಲ. ರಾಜಕಾರಣಿಗಳು ವಾಸ್ತವಾಂಶ ಅರಿಯಬೇಕು’ ಎಂದಿದ್ದಾರೆ. ಅಲ್ಲದೇ, ಕೇಜ್ರಿವಾಲ್ ಹೇಳಿಕೆಯಿಂದ ಉಂಟಾದ ಗೊಂದಲವನ್ನು ನಿವಾರಿಸಿದ್ದಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಧನ್ಯವಾದ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>