ಸಿಂಗಪುರ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಸಹ ಟ್ವೀಟ್ ಮಾಡಿದ್ದು, ‘ಸಿಂಗಪುರ ತಳಿ ಎಂಬುದೇ ಇಲ್ಲ. ರಾಜಕಾರಣಿಗಳು ವಾಸ್ತವಾಂಶ ಅರಿಯಬೇಕು’ ಎಂದಿದ್ದಾರೆ. ಅಲ್ಲದೇ, ಕೇಜ್ರಿವಾಲ್ ಹೇಳಿಕೆಯಿಂದ ಉಂಟಾದ ಗೊಂದಲವನ್ನು ನಿವಾರಿಸಿದ್ದಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಧನ್ಯವಾದ ಹೇಳಿದ್ದಾರೆ.