ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಸ್ವಾಗತಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈ ಕಾಯ್ದೆಗಳ ರದ್ದತಿಗಾಗಿ ಹೋರಾಡಿ ಮೃತಪಟ್ಟ ರೈತರ ‘ತ್ಯಾಗ’ ಅಮರವಾಗಿರುತ್ತದೆ ಎಂದು ಹೇಳಿದ್ದಾರೆ.
‘ಪ್ರಕಾಶ್ ದಿವಸ್’ದಂದು ಇಂಥ ಉತ್ತಮ ಸುದ್ದಿಯೊಂದು ಹೊರಬಿದ್ದಿದೆ. ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಈ ಬೇಡಿಕೆ ಈಡೇರಿಕೆಗಾಗಿ 700 ರೈತರು ಹುತಾತ್ಮರಾಗಿದ್ದಾರೆ. ಅವರ ತ್ಯಾಗ ಅಮರವಾಗಿರುತ್ತದೆ. ದೇಶದ ರೈತರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೃಷಿ ಮತ್ತು ರೈತರನ್ನು ಹೇಗೆ ಉಳಿಸಿದರು ಎಂಬುದನ್ನು ಮುಂದಿನ ಪೀಳಿಗೆ ನೆನಪಿಸಿಕೊಳ್ಳುತ್ತದೆ. ನನ್ನ ದೇಶದ ರೈತರಿಗೆ ಗೌರವ ನಮನಗಳು’ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
आज प्रकाश दिवस के दिन कितनी बड़ी ख़ुशख़बरी मिली। तीनों क़ानून रद्द। 700 से ज़्यादा किसान शहीद हो गए। उनकी शहादत अमर रहेगी। आने वाली पीढ़ियाँ याद रखेंगी कि किस तरह इस देश के किसानों ने अपनी जान की बाज़ी लगाकर किसानी और किसानों को बचाया था। मेरे देश के किसानों को मेरा नमन