ಕಾನ್ಪುರದಲ್ಲಿ ಪಕ್ಷದಜಿಲ್ಲಾ ಕೇಂದ್ರ ಕಚೇರಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ‘ಈ ಹಿಂದೆ ರಾಜ್ಯದಲ್ಲಿ ಪ್ರತೀ ಮೂರ್ನಾಲ್ಕು ದಿನಗಳಿಗೊಮ್ಮೆ ಗಲಭೆಗಳು ನಡೆಯುತ್ತಿದ್ದವು. ಈಗ ಉತ್ತರ ಪ್ರದೇಶಕ್ಕೆ ಗಲಭೆ ಮುಕ್ತ ರಾಜ್ಯ ಎಂಬ ಹೆಸರು ಬಂದಿದೆ. ಚಾಚಾ ಜಾನ್(ಓವೈಸಿ), ಅಬ್ಬಾ ಜಾನ್(ಮುಲಾಯಂ) ಅನುಯಾಯಿಗಳೇ ಕೇಳಿ. ರಾಜ್ಯದ ಹಿತಾಸಕ್ತಿ ಬಲಿಕೊಡುವ ಗಲಭೆಗೆ ಪ್ರಚೋದನೆ ನೀಡುವಂತಹ ಕೃತ್ಯ ಎಸಗಿದರೆ ಅದರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳುವುದು ನಮಗೆ ತಿಳಿದಿದೆ’ಎಂದು ಎಚ್ಚರಿಕೆ ನೀಡಿದ್ದಾರೆ.