ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪ್ರಚಾರ ಮುಗಿಸಿ ಬರುತ್ತಿದ್ದಾಗ ನನ್ನ ವಾಹನದ ಮೇಲೆ ಗುಂಡಿನ ದಾಳಿ: ಓವೈಸಿ

Last Updated 3 ಫೆಬ್ರುವರಿ 2022, 14:23 IST
ಅಕ್ಷರ ಗಾತ್ರ

ಲಖನೌ: ಮೀರತ್‌ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಮುಗಿಸಿ ದೆಹಲಿಗೆ ತೆರಳುತ್ತಿದ್ದಾಗ ನನ್ನ ವಾಹನದ ಮೇಲೆ ಗುಂಡಿನ ದಾಳಿ ನಡೆಯಿತು ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಆರೋಪಿಸಿದ್ದಾರೆ.

ಛಜರ್ಸಿ ಟೋಲ್ ಪ್ಲಾಜಾ ಬಳಿ ತಮ್ಮ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಿದ್ದಾರೆ ಎಂದು ಓವೈಸಿ ಹೇಳಿದ್ದಾಗಿ ಎಎನ್‌ಐ ಟ್ವೀಟ್ ಮಾಡಿದೆ. ಕಾರಿನ ಚಿತ್ರವನ್ನೂ ಎಎನ್‌ಐ ಟ್ವೀಟ್ ಮಾಡಿದೆ.

ದಾಳಿಯಿಂದ ನನ್ನ ವಾಹನದ ಟೈರ್‌ಗಳು ಪಂಕ್ಚರ್ ಆದವು. ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದರು ಎಂದು ಓವೈಸಿ ತಿಳಿಸಿದ್ದಾರೆ.

ಘಟನೆ ಬಳಿಕ ಬೇರೆ ವಾಹನದಲ್ಲಿ ತೆರಳಿದ್ದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT