<p><strong>ಔರಂಗಾಬಾದ್, ಮಹಾರಾಷ್ಟ್ರ: </strong>‘ಭಾರತಕ್ಕೆಈಗ ಏಕರೂಪ ನಾಗರಿಕತೆ ಸಂಹಿತೆಯ (ಯುಸಿಸಿ) ಅಗತ್ಯವಿಲ್ಲ. ಭಾರತೀಯ ಕಾನೂನು ಆಯೋಗ ಸಹ ಯುಸಿಸಿ ಅಗತ್ಯವಿಲ್ಲವೆಂದು ಹೇಳುತ್ತದೆ’ ಎಂದುಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಹೇಳಿದರು.</p>.<p>ಔರಂಗಾಬಾದ್ ಸಂಸದ ಇಮ್ತಿಯಾಜ್ ಜಲೀಲ್ ಆಯೋಜಿಸಿದ್ದ ಇಫ್ತಿಯಾರ್ ಕೂಟಕ್ಕೆ ಆಗಮಿಸಿದ್ದ ಒವೈಸಿ ಹಾಗೂ ಶಿಕ್ಷಣ ತಜ್ಞ ಡಾ. ಗಫಾರ್ ಖಾದ್ರಿ ಅವರು, ಬಿಜೆಪಿಯು ತನ್ನ ಆಡಳಿತದ ರಾಜ್ಯಗಳಲ್ಲಿ ತನ್ನದೇ ಆದ ನಾಗರಿಕ ಸಂಹಿತೆಗಳನ್ನು ಜಾರಿಗೆ ತರುತ್ತಿರುವುದರ ಬಗ್ಗೆ ಪ್ರಶ್ನಿಸಿದರು.</p>.<p><a href="https://www.prajavani.net/india-news/energy-security-to-be-among-key-areas-of-talks-during-pm-modis-3-nation-visit-933112.html" itemprop="url">ನಾಳೆಯಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಇಂಧನ ಕ್ಷೇತ್ರದ ಭದ್ರತೆ ಪ್ರಮುಖ ವಿಷಯ </a></p>.<p>ಬಿಜೆಪಿ ಆಡಳಿತವಿರುವ ಗೋವಾ ರಾಜ್ಯದ ಬಗ್ಗೆ ಪ್ರಸ್ತಾಪ ಮಾಡಿದ ಒವೈಸಿ, ‘ದಂಪತಿಗೆ 30 ವರ್ಷವಾದ ನಂತರವೂ ಗಂಡು ಮಕ್ಕಳಾಗದಿದ್ದರೆ, ಹಿಂದೂ ಪುರುಷರು ಮರು ಮದುವೆ ಆಗಬಹುದು ಎಂದು ಗೋವಾ ನಾಗರಿಕ ಸಂಹಿತೆ ತಿಳಿಸುತ್ತದೆ. ಈ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಹಿಂದೂ ಅವಿಭಕ್ತ ಕುಟುಂಬಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಲಾಗುತ್ತಿದೆ. ಆದರೆ ಈ ವಿನಾಯಿತಿ ಮುಸ್ಲಿಂ, ಸಿಖ್ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಏಕಿಲ್ಲ? ಹಾಗೆಯೇ ಭಾರತದ ಸಂವಿಧಾನವು ಮೇಘಾಲಯ, ಮಿಜೋರಾಂ ಹಾಗೂ ನಾಗಾಲ್ಯಾಂಡ್ಗಳ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತದೆ. ಇದು ಹಕ್ಕುಗಳ ಉಲ್ಲಂಘನೆ ಅಲ್ಲವೇ?’ ಎಂದು ಪ್ರಶ್ನಿಸಿದರು.</p>.<p>ರಾಷ್ಟ್ರ ನೀತಿಯ ನಿರ್ದೇಶನ ತತ್ವಗಳನ್ನು ಉಲ್ಲೇಖಿಸಿ, ‘ಈ ನೀತಿಯು ಮದ್ಯ ನಿಷೇಧದ ಬಗ್ಗೆ ತಿಳಿಸುತ್ತದೆ. ಆದರೆ ಯಾರೂ ಈ ಬಗ್ಗೆ ಮಾತನಾಡುವುದಿಲ್ಲ.ದೇಶದಲ್ಲಿ ಆರ್ಥಿಕತೆ ಕುಸಿಯುತ್ತಿದೆ. ಕಲ್ಲಿದ್ದಲು ಸಾಗಣೆಗೆ ಪ್ರಯಾಣಿಕರ ರೈಲುಗಳನ್ನು ರದ್ದುಗೊಳಿಸಲಾಗುತ್ತಿದೆ. ನಿರುದ್ಯೋಗವು ಬೆಳೆಯುತ್ತಿದೆ. ಏಕರೂಪ ನಾಗರಿಕ ಸಂಹಿತೆ ಬದಲು, ಆ ಬಗ್ಗೆ ಗಮನ ಹರಿಸುವುದು ಮುಖ್ಯ‘ ಎಂದು ತಿಳಿಸಿದರು.</p>.<p><a href="https://www.prajavani.net/india-news/will-support-fight-to-include-marathi-speaking-karnataka-areas-in-maharashtra-dy-cm-ajit-pawar-933109.html" itemprop="url">ಮರಾಠಿಗರಿರುವ ಕನ್ನಡ ನೆಲ ಮಹಾರಾಷ್ಟ್ರಕ್ಕೆ ಸೇರ್ಪಡೆ ಹೋರಾಟಕ್ಕೆ ಬೆಂಬಲ: ಪವಾರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಂಗಾಬಾದ್, ಮಹಾರಾಷ್ಟ್ರ: </strong>‘ಭಾರತಕ್ಕೆಈಗ ಏಕರೂಪ ನಾಗರಿಕತೆ ಸಂಹಿತೆಯ (ಯುಸಿಸಿ) ಅಗತ್ಯವಿಲ್ಲ. ಭಾರತೀಯ ಕಾನೂನು ಆಯೋಗ ಸಹ ಯುಸಿಸಿ ಅಗತ್ಯವಿಲ್ಲವೆಂದು ಹೇಳುತ್ತದೆ’ ಎಂದುಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಹೇಳಿದರು.</p>.<p>ಔರಂಗಾಬಾದ್ ಸಂಸದ ಇಮ್ತಿಯಾಜ್ ಜಲೀಲ್ ಆಯೋಜಿಸಿದ್ದ ಇಫ್ತಿಯಾರ್ ಕೂಟಕ್ಕೆ ಆಗಮಿಸಿದ್ದ ಒವೈಸಿ ಹಾಗೂ ಶಿಕ್ಷಣ ತಜ್ಞ ಡಾ. ಗಫಾರ್ ಖಾದ್ರಿ ಅವರು, ಬಿಜೆಪಿಯು ತನ್ನ ಆಡಳಿತದ ರಾಜ್ಯಗಳಲ್ಲಿ ತನ್ನದೇ ಆದ ನಾಗರಿಕ ಸಂಹಿತೆಗಳನ್ನು ಜಾರಿಗೆ ತರುತ್ತಿರುವುದರ ಬಗ್ಗೆ ಪ್ರಶ್ನಿಸಿದರು.</p>.<p><a href="https://www.prajavani.net/india-news/energy-security-to-be-among-key-areas-of-talks-during-pm-modis-3-nation-visit-933112.html" itemprop="url">ನಾಳೆಯಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಇಂಧನ ಕ್ಷೇತ್ರದ ಭದ್ರತೆ ಪ್ರಮುಖ ವಿಷಯ </a></p>.<p>ಬಿಜೆಪಿ ಆಡಳಿತವಿರುವ ಗೋವಾ ರಾಜ್ಯದ ಬಗ್ಗೆ ಪ್ರಸ್ತಾಪ ಮಾಡಿದ ಒವೈಸಿ, ‘ದಂಪತಿಗೆ 30 ವರ್ಷವಾದ ನಂತರವೂ ಗಂಡು ಮಕ್ಕಳಾಗದಿದ್ದರೆ, ಹಿಂದೂ ಪುರುಷರು ಮರು ಮದುವೆ ಆಗಬಹುದು ಎಂದು ಗೋವಾ ನಾಗರಿಕ ಸಂಹಿತೆ ತಿಳಿಸುತ್ತದೆ. ಈ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಹಿಂದೂ ಅವಿಭಕ್ತ ಕುಟುಂಬಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಲಾಗುತ್ತಿದೆ. ಆದರೆ ಈ ವಿನಾಯಿತಿ ಮುಸ್ಲಿಂ, ಸಿಖ್ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಏಕಿಲ್ಲ? ಹಾಗೆಯೇ ಭಾರತದ ಸಂವಿಧಾನವು ಮೇಘಾಲಯ, ಮಿಜೋರಾಂ ಹಾಗೂ ನಾಗಾಲ್ಯಾಂಡ್ಗಳ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತದೆ. ಇದು ಹಕ್ಕುಗಳ ಉಲ್ಲಂಘನೆ ಅಲ್ಲವೇ?’ ಎಂದು ಪ್ರಶ್ನಿಸಿದರು.</p>.<p>ರಾಷ್ಟ್ರ ನೀತಿಯ ನಿರ್ದೇಶನ ತತ್ವಗಳನ್ನು ಉಲ್ಲೇಖಿಸಿ, ‘ಈ ನೀತಿಯು ಮದ್ಯ ನಿಷೇಧದ ಬಗ್ಗೆ ತಿಳಿಸುತ್ತದೆ. ಆದರೆ ಯಾರೂ ಈ ಬಗ್ಗೆ ಮಾತನಾಡುವುದಿಲ್ಲ.ದೇಶದಲ್ಲಿ ಆರ್ಥಿಕತೆ ಕುಸಿಯುತ್ತಿದೆ. ಕಲ್ಲಿದ್ದಲು ಸಾಗಣೆಗೆ ಪ್ರಯಾಣಿಕರ ರೈಲುಗಳನ್ನು ರದ್ದುಗೊಳಿಸಲಾಗುತ್ತಿದೆ. ನಿರುದ್ಯೋಗವು ಬೆಳೆಯುತ್ತಿದೆ. ಏಕರೂಪ ನಾಗರಿಕ ಸಂಹಿತೆ ಬದಲು, ಆ ಬಗ್ಗೆ ಗಮನ ಹರಿಸುವುದು ಮುಖ್ಯ‘ ಎಂದು ತಿಳಿಸಿದರು.</p>.<p><a href="https://www.prajavani.net/india-news/will-support-fight-to-include-marathi-speaking-karnataka-areas-in-maharashtra-dy-cm-ajit-pawar-933109.html" itemprop="url">ಮರಾಠಿಗರಿರುವ ಕನ್ನಡ ನೆಲ ಮಹಾರಾಷ್ಟ್ರಕ್ಕೆ ಸೇರ್ಪಡೆ ಹೋರಾಟಕ್ಕೆ ಬೆಂಬಲ: ಪವಾರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>