ಬಿಜೆಪಿ ಆಡಳಿತವಿರುವ ಗೋವಾ ರಾಜ್ಯದ ಬಗ್ಗೆ ಪ್ರಸ್ತಾಪ ಮಾಡಿದ ಒವೈಸಿ, ‘ದಂಪತಿಗೆ 30 ವರ್ಷವಾದ ನಂತರವೂ ಗಂಡು ಮಕ್ಕಳಾಗದಿದ್ದರೆ, ಹಿಂದೂ ಪುರುಷರು ಮರು ಮದುವೆ ಆಗಬಹುದು ಎಂದು ಗೋವಾ ನಾಗರಿಕ ಸಂಹಿತೆ ತಿಳಿಸುತ್ತದೆ. ಈ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಹಿಂದೂ ಅವಿಭಕ್ತ ಕುಟುಂಬಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಲಾಗುತ್ತಿದೆ. ಆದರೆ ಈ ವಿನಾಯಿತಿ ಮುಸ್ಲಿಂ, ಸಿಖ್ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಏಕಿಲ್ಲ? ಹಾಗೆಯೇ ಭಾರತದ ಸಂವಿಧಾನವು ಮೇಘಾಲಯ, ಮಿಜೋರಾಂ ಹಾಗೂ ನಾಗಾಲ್ಯಾಂಡ್ಗಳ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತದೆ. ಇದು ಹಕ್ಕುಗಳ ಉಲ್ಲಂಘನೆ ಅಲ್ಲವೇ?’ ಎಂದು ಪ್ರಶ್ನಿಸಿದರು.