ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ವ್ಯಾಪ್ತಿಯ ಸಂರಕ್ಷಿತ ಸ್ಮಾರಕಗಳಿಗೆ ಮೇ 31ರ ವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಬುಧವಾರ ತಿಳಿಸಿದರು.
ಈ ಮೊದಲು, ಎಎಸ್ಐ ವ್ಯಾಪ್ತಿಯ ಸಂರಕ್ಷಿತ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳಿಗೆ ಸಾರ್ವಜನಿಕರ ಪ್ರವೇಶವನ್ನು ಮೇ 15ರವರೆಗೆ ನಿರ್ಬಂಧಿಸಲಾಗಿತ್ತು.
ದೇಶದಲ್ಲಿ 3,693 ಸ್ಮಾರಕಗಳು ಹಾಗೂ 50 ವಸ್ತುಸಂಗ್ರಹಾಲಯಗಳಿವೆ.