ಮಹಮ್ಮದ್ ಘೋರಿಯ ಆಡಳಿತ ಅವಧಿಯಲ್ಲಿ ಸೇನಾ ನಾಯಕನಾಗಿದ್ದ ಕುತುಬುದ್ದೀನ್ ಐಬಕ್, 27 ದೇವಾಲಯಗಳನ್ನು ಭಾಗಶಃ ಧ್ವಂಸ ಮಾಡಿದ್ದನು. ಅಲ್ಲದೆ ಆ ಸಾಮಗ್ರಿಗಳನ್ನು ಮರುಬಳಕೆ ಮಾಡಿಕೊಂಡು ಕುವ್ವತ್ ಉಲ್ ಇಸ್ಲಾಂ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ವಕೀಲ ಹರಿಶಂಕರ್ ಜೈನ್ ಪ್ರತಿಪಾದಿಸಿ ಅರ್ಜಿ ಸಲ್ಲಿಸಿದ್ದಾರೆ.