<p><strong>ನವದೆಹಲಿ:</strong> ‘ಕುತುಬ್ ಮಿನಾರ್ ಸಂಕೀರ್ಣವುಪೂಜಾ ಸ್ಥಳವಲ್ಲ ಮತ್ತು ಸ್ಮಾರಕದ ಈಗಿನ ಸ್ಥಿತಿಯನ್ನು ಬದಲಾಯಿಸಲು ಆಗುವುದಿಲ್ಲ’ ಎಂದುಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮಂಗಳವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.</p>.<p>ಕುತುಬ್ ಮಿನಾರ್ ಸಂಕೀರ್ಣದ ಒಳಗೆ ಹಿಂದೂ ಮತ್ತು ಜೈನ ದೇವರುಗಳನ್ನು ಮರುಸ್ಥಾಪಿಸಲು ಕೋರಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗೆ ಎಎಸ್ಐ ವಿರೋಧ ವ್ಯಕ್ತಪಡಿಸಿದೆ.</p>.<p>‘ಸಂಕೀರ್ಣದ ಜಾಗದ ಈಗಿನ ಸ್ಥಿತಿಯನ್ನು ಬದಲಿಸುವ ಮೂಲಕ ಅರ್ಜಿದಾರರು ಮೂಲಭೂತ ಹಕ್ಕನ್ನು ಪಡೆಯಲಾಗದು’ ಎಂದು ಎಎಸ್ಐ ಪ್ರತಿಪಾದಿಸಿದೆ. ಎಎಸ್ಐ ವಾದವನ್ನು ಗಮನಿಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿಖಿಲ್ ಚೋಪ್ರಾ ಅವರು, ಅರ್ಜಿಯ ಆದೇಶವನ್ನು ಜೂನ್ 9ರವರೆಗೆ ಕಾಯ್ದಿರಿಸಿದರು.</p>.<p>ಮಹಮ್ಮದ್ ಘೋರಿಯ ಆಡಳಿತ ಅವಧಿಯಲ್ಲಿ ಸೇನಾ ನಾಯಕನಾಗಿದ್ದ ಕುತುಬುದ್ದೀನ್ ಐಬಕ್, 27 ದೇವಾಲಯಗಳನ್ನು ಭಾಗಶಃ ಧ್ವಂಸ ಮಾಡಿದ್ದನು. ಅಲ್ಲದೆ ಆ ಸಾಮಗ್ರಿಗಳನ್ನು ಮರುಬಳಕೆ ಮಾಡಿಕೊಂಡು ಕುವ್ವತ್ ಉಲ್ ಇಸ್ಲಾಂ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ವಕೀಲ ಹರಿಶಂಕರ್ ಜೈನ್ ಪ್ರತಿಪಾದಿಸಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಅನಾದಿ ಕಾಲದಿಂದಲೂ ಈ ಆವರಣದಲ್ಲಿ ಎರಡು ಗಣೇಶನ ವಿಗ್ರಹಗಳು ನೆಲೆಗೊಂಡಿವೆ. ಅವುಗಳನ್ನು ಎಎಸ್ಐ ರಾಷ್ಟ್ರೀಯ ವಸ್ತುಸಂಗ್ರಹಾಲಯವೊಂದಕ್ಕೆ ಸಾಗಿಸುವ ಸಾಧ್ಯತೆಗಳಿವೆ ಎಂದು ಅವರು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕುತುಬ್ ಮಿನಾರ್ ಸಂಕೀರ್ಣವುಪೂಜಾ ಸ್ಥಳವಲ್ಲ ಮತ್ತು ಸ್ಮಾರಕದ ಈಗಿನ ಸ್ಥಿತಿಯನ್ನು ಬದಲಾಯಿಸಲು ಆಗುವುದಿಲ್ಲ’ ಎಂದುಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮಂಗಳವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.</p>.<p>ಕುತುಬ್ ಮಿನಾರ್ ಸಂಕೀರ್ಣದ ಒಳಗೆ ಹಿಂದೂ ಮತ್ತು ಜೈನ ದೇವರುಗಳನ್ನು ಮರುಸ್ಥಾಪಿಸಲು ಕೋರಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗೆ ಎಎಸ್ಐ ವಿರೋಧ ವ್ಯಕ್ತಪಡಿಸಿದೆ.</p>.<p>‘ಸಂಕೀರ್ಣದ ಜಾಗದ ಈಗಿನ ಸ್ಥಿತಿಯನ್ನು ಬದಲಿಸುವ ಮೂಲಕ ಅರ್ಜಿದಾರರು ಮೂಲಭೂತ ಹಕ್ಕನ್ನು ಪಡೆಯಲಾಗದು’ ಎಂದು ಎಎಸ್ಐ ಪ್ರತಿಪಾದಿಸಿದೆ. ಎಎಸ್ಐ ವಾದವನ್ನು ಗಮನಿಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿಖಿಲ್ ಚೋಪ್ರಾ ಅವರು, ಅರ್ಜಿಯ ಆದೇಶವನ್ನು ಜೂನ್ 9ರವರೆಗೆ ಕಾಯ್ದಿರಿಸಿದರು.</p>.<p>ಮಹಮ್ಮದ್ ಘೋರಿಯ ಆಡಳಿತ ಅವಧಿಯಲ್ಲಿ ಸೇನಾ ನಾಯಕನಾಗಿದ್ದ ಕುತುಬುದ್ದೀನ್ ಐಬಕ್, 27 ದೇವಾಲಯಗಳನ್ನು ಭಾಗಶಃ ಧ್ವಂಸ ಮಾಡಿದ್ದನು. ಅಲ್ಲದೆ ಆ ಸಾಮಗ್ರಿಗಳನ್ನು ಮರುಬಳಕೆ ಮಾಡಿಕೊಂಡು ಕುವ್ವತ್ ಉಲ್ ಇಸ್ಲಾಂ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ವಕೀಲ ಹರಿಶಂಕರ್ ಜೈನ್ ಪ್ರತಿಪಾದಿಸಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಅನಾದಿ ಕಾಲದಿಂದಲೂ ಈ ಆವರಣದಲ್ಲಿ ಎರಡು ಗಣೇಶನ ವಿಗ್ರಹಗಳು ನೆಲೆಗೊಂಡಿವೆ. ಅವುಗಳನ್ನು ಎಎಸ್ಐ ರಾಷ್ಟ್ರೀಯ ವಸ್ತುಸಂಗ್ರಹಾಲಯವೊಂದಕ್ಕೆ ಸಾಗಿಸುವ ಸಾಧ್ಯತೆಗಳಿವೆ ಎಂದು ಅವರು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>