‘ಚುನಾವಣೆಯಲ್ಲಿ ಮತ ಪಡೆಯಲು ಇಚ್ಛಿಸಿದರೆ ಈ ಶಾಸಕರು ತಮ್ಮ ತಂದೆಯ ಹೆಸರನ್ನು ಹೇಳಿಕೊಂಡು ಹೋಗಲಿ. ಶಿವಸೇನಾದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಬಾರದು’ ಎಂದು ಮುಂಬೈನ ಶಿವಸೇನಾ ಭವನದಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉದ್ಧವ್ ಠಾಕ್ರೆ ಹೇಳಿರುವುದಾಗಿ ಪ್ರಧಾನ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.