<p><strong>ಗುವಾಹಟಿ:</strong> ‘ಅಸ್ಸಾಂ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಒಳನಾಡು ಜಲ ಸಾರಿಗೆ ಇಲಾಖೆಯ (ಐಡಬ್ಲ್ಯುಟಿ) ಆರು ಸಿಬ್ಬಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.</p>.<p>ಸೆಪ್ಟೆಂಬರ್ 8ರಂದು ಜೊರ್ಹಾತ್ ಜಿಲ್ಲೆಯ ನಿಮತಿ ಘಾಟ್ ಬಳಿ ಖಾಸಗಿ ದೋಣಿ ‘ಮ ಕಮಲಾ’, ಸರ್ಕಾರಿ ಸ್ವಾಮ್ಯದ ದೋಣಿಗೆ ಡಿಕ್ಕಿ ಹೊಡೆದಿತ್ತು. ಇದರಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ನಾಪತ್ತೆಯಾಗಿದ್ದಾರೆ.</p>.<p>‘ಖಾಸಗಿ ದೋಣಿಯ ಮೂವರು ಕೆಲಸಗಾರರನ್ನು ವಿಚಾರಿಸುತ್ತಿದ್ದೇವೆ. ಇನ್ನೂ ಕೆಲವು ಅಧಿಕಾರಿಗಳಿಗೆ ಹೇಳಿಕೆ ದಾಖಲಿಸುವಂತೆ ಸಮನ್ಸ್ ಜಾರಿ ಮಾಡಿದ್ದೇವೆ’ ಎಂದು ಜೊರ್ಹಾತ್ನ ಪೊಲೀಸ್ ವರಿಷ್ಠಾಧಿಕಾರಿ ಅಂಕುರ್ ಜೈನ್ ಅವರು ತಿಳಿಸಿದರು.</p>.<p>‘ಐಡಬ್ಲ್ಯುಟಿಯ ಆರು ಸಿಬ್ಬಂದಿ ನಿಯಮಗಳನ್ನು ಅನುಸರಿಸದೇ, ತಪ್ಪನ್ನು ಮಾಡಿದ್ದಾರೆ. ಈ ದುರಂತವನ್ನು ತಪ್ಪಿಸಬಹುದಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನುನಿಮತಿ ಘಾಟ್ನಿಂದ ಬಂಧಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಸದ್ಯ ನಾವು ಅಪಘಾತ ಹೇಗೆ ಸಂಭವಿಸಿರಬಹುದು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಘಟನಾ ಸನ್ನಿವೇಶನವನ್ನು ಪುನರ್ರಚಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ‘ಅಸ್ಸಾಂ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಒಳನಾಡು ಜಲ ಸಾರಿಗೆ ಇಲಾಖೆಯ (ಐಡಬ್ಲ್ಯುಟಿ) ಆರು ಸಿಬ್ಬಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.</p>.<p>ಸೆಪ್ಟೆಂಬರ್ 8ರಂದು ಜೊರ್ಹಾತ್ ಜಿಲ್ಲೆಯ ನಿಮತಿ ಘಾಟ್ ಬಳಿ ಖಾಸಗಿ ದೋಣಿ ‘ಮ ಕಮಲಾ’, ಸರ್ಕಾರಿ ಸ್ವಾಮ್ಯದ ದೋಣಿಗೆ ಡಿಕ್ಕಿ ಹೊಡೆದಿತ್ತು. ಇದರಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ನಾಪತ್ತೆಯಾಗಿದ್ದಾರೆ.</p>.<p>‘ಖಾಸಗಿ ದೋಣಿಯ ಮೂವರು ಕೆಲಸಗಾರರನ್ನು ವಿಚಾರಿಸುತ್ತಿದ್ದೇವೆ. ಇನ್ನೂ ಕೆಲವು ಅಧಿಕಾರಿಗಳಿಗೆ ಹೇಳಿಕೆ ದಾಖಲಿಸುವಂತೆ ಸಮನ್ಸ್ ಜಾರಿ ಮಾಡಿದ್ದೇವೆ’ ಎಂದು ಜೊರ್ಹಾತ್ನ ಪೊಲೀಸ್ ವರಿಷ್ಠಾಧಿಕಾರಿ ಅಂಕುರ್ ಜೈನ್ ಅವರು ತಿಳಿಸಿದರು.</p>.<p>‘ಐಡಬ್ಲ್ಯುಟಿಯ ಆರು ಸಿಬ್ಬಂದಿ ನಿಯಮಗಳನ್ನು ಅನುಸರಿಸದೇ, ತಪ್ಪನ್ನು ಮಾಡಿದ್ದಾರೆ. ಈ ದುರಂತವನ್ನು ತಪ್ಪಿಸಬಹುದಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನುನಿಮತಿ ಘಾಟ್ನಿಂದ ಬಂಧಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಸದ್ಯ ನಾವು ಅಪಘಾತ ಹೇಗೆ ಸಂಭವಿಸಿರಬಹುದು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಘಟನಾ ಸನ್ನಿವೇಶನವನ್ನು ಪುನರ್ರಚಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>