<p><strong>ಗುವಾಹಟಿ</strong>: ಮಹಾ ವಿಕಾಸ್ ಅಘಾಡಿ ನೇತೃತ್ವದ ಸರ್ಕಾರದ ವಿರುದ್ಧ ಬಂಡೆದ್ದಿರುವ ಸಚಿವ ಏಕನಾಥ್ ಶಿಂಧೆ ಸುಮಾರು 40 ಶಾಸಕರ ಜೊತೆ ಇಲ್ಲಿನ ಸ್ಟಾರ್ ಹೋಟೆಲ್ವೊಂದರಲ್ಲಿ ಬೀಡು ಬಿಟ್ಟಿದ್ದಾರೆ.</p>.<p>ಶಿವಸೇನಾದ ಬಂಡಾಯ ಶಾಸಕರು ಅಸ್ಸಾಂ ತೊರೆಯುವಂತೆ ಒತ್ತಾಯಿಸಿ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ‘ಪಿಟಿಐ’ ಟ್ವೀಟ್ ಮಾಡಿದೆ.</p>.<p>‘ಅಸ್ಸಾಂ ರಾಜ್ಯವು ಭೀಕರ ಪ್ರವಾಹದಿಂದ ತತ್ತರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಶಿವಸೇನಾ ಬಂಡಾಯ ಶಾಸಕರು ಇಲ್ಲಿರುವುದು ಸೂಕ್ತವಲ್ಲ. ಅವರು ರಾಜ್ಯವನ್ನು ತೊರೆಯಬೇಕು’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.</p>.<p><strong>ಮಹಾರಾಷ್ಟ್ರದಲ್ಲಿನ ಬಲಾಬಲ</strong></p>.<p>288 ಸದಸ್ಯರನ್ನು ಒಳಗೊಂಡಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನಾ 55 ಶಾಸಕರ ಬಲ ಹೊಂದಿದೆ. ಎನ್ಸಿಪಿ 53, ಕಾಂಗ್ರೆಸ್ನ 44, ಬಹುಜನ ವಿಕಾಸ ಆಘಾಡಿ 3, ಸಮಾಜವಾದಿ ಪಕ್ಷ, ಎಐಎಂಐಎಂ ಹಾಗೂ ಪ್ರಹಾರ್ ಜನಶಕ್ತಿ ಪಾರ್ಟಿಯ ತಲಾ ಇಬ್ಬರು ಶಾಸಕರಿದ್ದಾರೆ.</p>.<p>ಎಂಎನ್ಎಸ್, ಸಿಬಿಐ–ಎಂ, ಪಿಡಬ್ಲ್ಯುಪಿ, ಸ್ವಾಭಿಮಾನಿ ಪಕ್ಷ, ರಾಷ್ಟ್ರೀಯ ಸಮಾಜ ಪಾರ್ಟಿ, ಜನಸೂರ್ಯ ಶಕ್ತಿ ಪಾರ್ಟಿ ಹಾಗೂ ಕ್ರಾಂತಿಕಾರಿ ಶೆತಕರಿ ಪಕ್ಷದಿಂದ ತಲಾ ಒಬ್ಬರು ಶಾಸಕರಿದ್ದಾರೆ. 13 ಮಂದಿ ಪಕ್ಷೇತರ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿಯಲ್ಲಿ 106 ಶಾಸಕರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಮಹಾ ವಿಕಾಸ್ ಅಘಾಡಿ ನೇತೃತ್ವದ ಸರ್ಕಾರದ ವಿರುದ್ಧ ಬಂಡೆದ್ದಿರುವ ಸಚಿವ ಏಕನಾಥ್ ಶಿಂಧೆ ಸುಮಾರು 40 ಶಾಸಕರ ಜೊತೆ ಇಲ್ಲಿನ ಸ್ಟಾರ್ ಹೋಟೆಲ್ವೊಂದರಲ್ಲಿ ಬೀಡು ಬಿಟ್ಟಿದ್ದಾರೆ.</p>.<p>ಶಿವಸೇನಾದ ಬಂಡಾಯ ಶಾಸಕರು ಅಸ್ಸಾಂ ತೊರೆಯುವಂತೆ ಒತ್ತಾಯಿಸಿ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ‘ಪಿಟಿಐ’ ಟ್ವೀಟ್ ಮಾಡಿದೆ.</p>.<p>‘ಅಸ್ಸಾಂ ರಾಜ್ಯವು ಭೀಕರ ಪ್ರವಾಹದಿಂದ ತತ್ತರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಶಿವಸೇನಾ ಬಂಡಾಯ ಶಾಸಕರು ಇಲ್ಲಿರುವುದು ಸೂಕ್ತವಲ್ಲ. ಅವರು ರಾಜ್ಯವನ್ನು ತೊರೆಯಬೇಕು’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.</p>.<p><strong>ಮಹಾರಾಷ್ಟ್ರದಲ್ಲಿನ ಬಲಾಬಲ</strong></p>.<p>288 ಸದಸ್ಯರನ್ನು ಒಳಗೊಂಡಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನಾ 55 ಶಾಸಕರ ಬಲ ಹೊಂದಿದೆ. ಎನ್ಸಿಪಿ 53, ಕಾಂಗ್ರೆಸ್ನ 44, ಬಹುಜನ ವಿಕಾಸ ಆಘಾಡಿ 3, ಸಮಾಜವಾದಿ ಪಕ್ಷ, ಎಐಎಂಐಎಂ ಹಾಗೂ ಪ್ರಹಾರ್ ಜನಶಕ್ತಿ ಪಾರ್ಟಿಯ ತಲಾ ಇಬ್ಬರು ಶಾಸಕರಿದ್ದಾರೆ.</p>.<p>ಎಂಎನ್ಎಸ್, ಸಿಬಿಐ–ಎಂ, ಪಿಡಬ್ಲ್ಯುಪಿ, ಸ್ವಾಭಿಮಾನಿ ಪಕ್ಷ, ರಾಷ್ಟ್ರೀಯ ಸಮಾಜ ಪಾರ್ಟಿ, ಜನಸೂರ್ಯ ಶಕ್ತಿ ಪಾರ್ಟಿ ಹಾಗೂ ಕ್ರಾಂತಿಕಾರಿ ಶೆತಕರಿ ಪಕ್ಷದಿಂದ ತಲಾ ಒಬ್ಬರು ಶಾಸಕರಿದ್ದಾರೆ. 13 ಮಂದಿ ಪಕ್ಷೇತರ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿಯಲ್ಲಿ 106 ಶಾಸಕರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>