ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ಗಡಿ ಹಿಂಸಾಚಾರದಲ್ಲಿ ಪೊಲೀಸರ ಸಾವು– ಮೂರು ದಿನ ಶೋಕಾಚರಣೆ

Last Updated 27 ಜುಲೈ 2021, 8:27 IST
ಅಕ್ಷರ ಗಾತ್ರ

ಗುವಾಹಟಿ: ಮಿಜೋರಾಂನೊಂದಿಗಿನ ಗಡಿ ಸಂಘರ್ಷದಲ್ಲಿ ಅಸ್ಸಾಂನ ಐವರು ಪೊಲೀಸ್‌ ಸಿಬ್ಬಂದಿ ಮತ್ತು ನಾಗರಿಕರೊಬ್ಬರು ಮೃತಪಟ್ಟಿದ್ದು, ಇವರ ಗೌರವಾರ್ಥ ಅಸ್ಸಾಂ ಸರ್ಕಾರವು ಮಂಗಳವಾರದಿಂದ ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಿದೆ.

ಈ ಅವಧಿಯಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು. ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂ–ಮಿಜೋರಾಂ ಗಡಿ ಹಿಂಸಾಚಾರದಲ್ಲಿ ಅಸ್ಸಾಂನ ಆರು ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹುತಾತ್ಮ ಪೊಲೀಸ್‌ ಸಿಬ್ಬಂದಿಗೆ ಪುಷ್ಪನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT