‘ಮೇ ತಿಂಗಳ ಮಧ್ಯ ಭಾಗದಿಂದ ಇಲ್ಲಿಯವರೆಗೆ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 101ಕ್ಕೆ ಏರಿದೆ. ಬ್ರಹ್ಮಪುತ್ರ ಹಾಗೂ ಬಾರಕ್ ನದಿ ಮತ್ತು ಅವುಗಳ ಉಪನದಿಗಳ ಪಾತ್ರದ 32 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ರಕ್ಷಣಾ ಪಡೆಯ (ಎಸ್ಡಿಆರ್ಎಫ್) ಸಹಾಯದಿಂದ ಪ್ರವಾಹದಲ್ಲಿ ಸಿಲುಕಿದ್ದ 3,658 ಮಂದಿಯನ್ನು 276 ಹಡಗುಗಳ ಮೂಲಕ ರಕ್ಷಿಸಲಾಗಿದೆ’ ಎಂದು ಅವರು ಹೇಳಿದರು.