ಗುವಾಹಟಿ: ಕೋವಿಡ್ ಚಿಕಿತ್ಸಾ ಕೇಂದ್ರವೊಂದರಲ್ಲಿ ಯುವ ವೈದ್ಯನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು 24 ಆರೋಪಿಗಳನ್ನು ಬಂಧಿಸಿದ್ದಾರೆ.
ಅಸ್ಸಾಂನ ಹೊಜೈ ಜಿಲ್ಲೆಯ ಒಡಾಲಿಯದ ಮಾಡೆಲ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದ್ದು, ಕೋವಿಡ್ ಸೋಂಕಿತನ ನಿಧನದ ನಂತರ ರೋಗಿಯ ಕುಟುಂಬದ ಸದಸ್ಯರು ಯುವ ವೈದ್ಯರನ್ನು ಕ್ರೂರವಾಗಿ ಥಳಿಸಿದ್ದರು.
ವೈದ್ಯರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ 24 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.
24 culprits involved in this barbaric attack have been arrested and the chargesheet will be filed at the earliest.
— Himanta Biswa Sarma (@himantabiswa) June 2, 2021
I am personally monitoring this investigation and I promise that justice will be served. https://t.co/CVgRaEW0di
ಈ ಕ್ರೂರ ಕೃತ್ಯದಲ್ಲಿ ಭಾಗಿಯಾಗಿರುವ 24 ಮಂದಿ ಅಪರಾಧಿಗಳನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್ಶೀಟ್ ದಾಖಲಿಸಲಾಗುವುದು. ನಾನು ಈ ತನಿಖೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ನ್ಯಾಯ ಒದಗಿಸುವ ಭರವಸೆ ನೀಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಹೇಳಿದ್ದಾರೆ.
ಹಲ್ಲೆಗೊಳಗಾದ ವೈದ್ಯರನ್ನು ಸೆಯುಜ್ ಕುಮಾರ್ ಸೇನಾಪತಿ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಕೋವಿಡ್ ಸೋಂಕಿತ ಮೃತಪಟ್ಟ ಬೆನ್ನಲ್ಲೇ ಆಕ್ರೋಶಗೊಂಡಿರುವ ಸಂಬಂಧಿಕರು ವೈದ್ಯರ ಮೇಲೆ ಏಕಾಏಕಿ ದಾಳಿ ನಡೆಸಿ ಥಳಿಸಿದ್ದರು. ಇದರಿಂದಾಗಿ ಯುವ ವೈದ್ಯ ಗಂಭೀರ ಗಾಯಗೊಂಡಿದ್ದರು.
HCM @himantabiswa sir.
— Dr. Kamal debnath (@debnath_aryan) June 1, 2021
Look for youself !!
This is the condition of our FRONTLINE WARRIORS DOCTORS in ASSAM.
We are bearing the burden of incompetency.@DGPAssamPolice @gpsinghassam @PMOIndia @assampolice @nhm_assam pic.twitter.com/V3mVK8QNxN
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಲ್ಲದೆ ವೈದ್ಯಕೀಯ ಜಗತ್ತು ಸೇರಿದಂತೆ ಎಲ್ಲ ವಿಭಾಗದಿಂದಲೂ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಬಳಿಕ ಪ್ರತಿಕ್ರಿಯಿಸಿರುವ ಡಾ. ಸೆಯುಜ್ ಕುಮಾರ್ ಸೇನಾಪತಿ, ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ಸಂಬಂಧಿಕರು ನನ್ನ ಬಳಿ ಹೇಳಿದ್ದರು. ನಾನು ರೋಗಿಯನ್ನು ಪರೀಕ್ಷಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ. ರೋಗಿಯ ಸಂಬಂಧಿಕರು ಆಸ್ಪತ್ರೆಯ ಪಿಠೋಪಕರಣಗಳನ್ನು ಧ್ವಂಸ ಮಾಡಿ ನನ್ನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದರುಎಂದು ಆರೋಪಿಸಿದ್ದಾರೆ.
Brutality against a Doctor post MBBS , rural posting is highly condemable . I demand an impartial inquiry and Strict action against those culprit. pic.twitter.com/dduekwvDih
— Dr Numal Momin MD. (@DrNumal) June 1, 2021
Such barbaric attacks on our frontline workers won't be tolerated by our administration. @gpsinghassam @assampolice Ensure that the culprits brought to justice. https://t.co/HwQfbWwYmn
— Himanta Biswa Sarma (@himantabiswa) June 1, 2021
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.