<p><strong>ಗುವಾಹಟಿ:</strong> ಅಸ್ಸಾಂ ಪರಿವರ್ತನೆಯನ್ನು ಎತ್ತಿ ತೋರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯವು ಈಗ ಅಭಿವೃದ್ಧಿ, ಕೈಗಾರಿಕಾ ಹೂಡಿಕೆ, ಶಿಕ್ಷಣ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ ಎಂದು ಹೇಳಿದರು.</p>.<p>ಹಿಂದೆಲ್ಲ ಪ್ರತಿಭಟನೆ, ಶಸ್ತಾಸ್ತ್ರ, ಹಿಂಸಾಚಾರಗಳಿಗೆ ಹೆಸರುವಾಸಿಯಾಗಿದ್ದ ಅಸ್ಸಾಂ ಈಗ ಅಭಿವೃದ್ಧಿ, ಕೈಗಾರಿಕಾ ಹೂಡಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕೆಗುರುತಿಸಿದೆ ಎಂದು ನಾಗೌನ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದರು.</p>.<p>ಮಾತು ಮುಂದುವರಿಸಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಸಚಿವ ಸಂಪುಟ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಾರಂಭಿಸಿದ ಹೊಸ ಯುಗದ ಅಭಿವೃದ್ಧಿಯ ಮೊದಲ ಹೆಜ್ಜೆ ಇದಾಗಿದೆ ಎಂದು ಹೇಳಿದರು.</p>.<p>ಪ್ರವಾಹ ಮುಕ್ತ, ಒಳನುಸುಳುವಿಕೆ ಮುಕ್ತ ಮತ್ತು ಹಿಂಸಾಚಾರ ಮುಕ್ತವನ್ನಾಗಿಸಿ ಈಶಾನ್ಯ ರಾಜ್ಯವನ್ನು ದೇಶದ ಅತಿ ದೊಡ್ಡ ಜಿಡಿಪಿ ಕೊಡುಗೆದಾರರನ್ನಾಗಿ ಮಾಡಬೇಕಿದೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/pm-launches-various-projects-in-puducherry-assures-centres-support-for-uts-development-808558.html" itemprop="url">ಪುದುಚೇರಿ ಅಭಿವೃದ್ಧಿಗೆ ಕೇಂದ್ರದ ನೆರವು: ಮೋದಿ ಭರವಸೆ </a></p>.<p>ಈಶಾನ್ಯದ ಎಲ್ಲ ಎಂಟು ರಾಜ್ಯಗಳಲ್ಲಿ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಅಧಿಕಾರದಲ್ಲಿದೆ. ಶಿಕ್ಷಣ ಹಾಗೂ ಪ್ರವಾಸೋದ್ಯಮದಂತಹ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಬಹುದು ಎಂಬುದನ್ನು ಅಸ್ಸಾಂ ಜನರು ಅರಿತುಕೊಂಡಿದ್ದಾರೆ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ 'ಮಹಾ ಮೃತ್ಯುಂಜಯ್' ದೇವಸ್ಥಾನಕ್ಕೆ ಭೇಟಿ ನೀಡಿದ ಅಮಿತ್ ಶಾ, 'ಪ್ರಾಣ ಪತಿಷ್ಠಾ ಮಹೋತ್ಸವ'ದಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅಸ್ಸಾಂ ಪರಿವರ್ತನೆಯನ್ನು ಎತ್ತಿ ತೋರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯವು ಈಗ ಅಭಿವೃದ್ಧಿ, ಕೈಗಾರಿಕಾ ಹೂಡಿಕೆ, ಶಿಕ್ಷಣ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ ಎಂದು ಹೇಳಿದರು.</p>.<p>ಹಿಂದೆಲ್ಲ ಪ್ರತಿಭಟನೆ, ಶಸ್ತಾಸ್ತ್ರ, ಹಿಂಸಾಚಾರಗಳಿಗೆ ಹೆಸರುವಾಸಿಯಾಗಿದ್ದ ಅಸ್ಸಾಂ ಈಗ ಅಭಿವೃದ್ಧಿ, ಕೈಗಾರಿಕಾ ಹೂಡಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕೆಗುರುತಿಸಿದೆ ಎಂದು ನಾಗೌನ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದರು.</p>.<p>ಮಾತು ಮುಂದುವರಿಸಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಸಚಿವ ಸಂಪುಟ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಾರಂಭಿಸಿದ ಹೊಸ ಯುಗದ ಅಭಿವೃದ್ಧಿಯ ಮೊದಲ ಹೆಜ್ಜೆ ಇದಾಗಿದೆ ಎಂದು ಹೇಳಿದರು.</p>.<p>ಪ್ರವಾಹ ಮುಕ್ತ, ಒಳನುಸುಳುವಿಕೆ ಮುಕ್ತ ಮತ್ತು ಹಿಂಸಾಚಾರ ಮುಕ್ತವನ್ನಾಗಿಸಿ ಈಶಾನ್ಯ ರಾಜ್ಯವನ್ನು ದೇಶದ ಅತಿ ದೊಡ್ಡ ಜಿಡಿಪಿ ಕೊಡುಗೆದಾರರನ್ನಾಗಿ ಮಾಡಬೇಕಿದೆ ಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/pm-launches-various-projects-in-puducherry-assures-centres-support-for-uts-development-808558.html" itemprop="url">ಪುದುಚೇರಿ ಅಭಿವೃದ್ಧಿಗೆ ಕೇಂದ್ರದ ನೆರವು: ಮೋದಿ ಭರವಸೆ </a></p>.<p>ಈಶಾನ್ಯದ ಎಲ್ಲ ಎಂಟು ರಾಜ್ಯಗಳಲ್ಲಿ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಅಧಿಕಾರದಲ್ಲಿದೆ. ಶಿಕ್ಷಣ ಹಾಗೂ ಪ್ರವಾಸೋದ್ಯಮದಂತಹ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಬಹುದು ಎಂಬುದನ್ನು ಅಸ್ಸಾಂ ಜನರು ಅರಿತುಕೊಂಡಿದ್ದಾರೆ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ 'ಮಹಾ ಮೃತ್ಯುಂಜಯ್' ದೇವಸ್ಥಾನಕ್ಕೆ ಭೇಟಿ ನೀಡಿದ ಅಮಿತ್ ಶಾ, 'ಪ್ರಾಣ ಪತಿಷ್ಠಾ ಮಹೋತ್ಸವ'ದಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>