ಗುವಾಹಟಿ: ‘ಅಸ್ಸಾಂನಲ್ಲಿ ಶನಿವಾರ ಮುಂಜಾನೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ.ಇದು ಕಳೆದ 24 ಗಂಟೆಗಳಲ್ಲಿ ಈಶಾನ್ಯ ಭಾಗದಲ್ಲಿ ಸಂಭವಿಸಿದ ಐದನೇ ಭೂಕಂಪವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಶುಕ್ರವಾರ ತಡರಾತ್ರಿ ಭೂಕಂಪ ಸಂಭವಿಸಿದ್ದು,ಸೋನಿತ್ಪುರ ಜಿಲ್ಲೆಯ ತೇಜಾಪುರದಲ್ಲಿ 30 ಕಿ.ಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಈ ವೇಳೆ ಯಾವುದೇ ಸಾವು–ನೋವು ಸಂಭವಿಸಿಲ್ಲ’ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರವು ಹೇಳಿದೆ.
‘ಶುಕ್ರವಾರವೂ ಎರಡು ಬಾರಿ ಭೂಮಿ ಕಂಪಿಸಿದೆ. ಇದರಲ್ಲಿ ಒಂದು ಭೂಕಂಪನದ ತೀವ್ರತೆಯು 4.1ರಷ್ಟಿತ್ತು. ಈ ಎರಡೂ ಭೂಕಂಪನದ ಕೇಂದ್ರ ಬಿಂದು ಸೋನಿತ್ಪುರ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಇದನ್ನು ಹೊರತುಪಡಿಸಿ ಮಣಿಪುರದ ಚಂದೇಲಾ ಜಿಲ್ಲೆಯಲ್ಲೂ ಶುಕ್ರವಾರ ಭೂಮಿ ನಲುಗಿದೆ. ಮೇಘಾಲಯದ ಪಶ್ಚಿಮ ಖಾಸಿ ಹಿಲ್ ಜಿಲ್ಲೆಯಲ್ಲಿ 2.6 ತೀವ್ರತೆಯಲ್ಲಿ ಭೂಕಂಪಿಸಿದೆ’ ಎಂದು ಅಧಿಕಾರಿಗಳು ಹೇಳಿದರು.
ಇದನ್ನೂ ಓದಿ:ಈಶಾನ್ಯ ರಾಜ್ಯಗಳಲ್ಲಿ ಭೂಕಂಪನ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.