<p><strong>ಗುವಾಹಟಿ</strong>: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಶಿವಸೇನಾದ 34 ಶಾಸಕರು ಹಾಗೂ 8 ಪಕ್ಷೇತರ ಶಾಸಕರು ಮಹಾ ವಿಕಾಸ್ ಅಗಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಎದ್ದು, ದೂರದ ಅಸ್ಸಾಂನಲ್ಲಿ ಹೋಗಿ ಕುಳಿತಿದ್ದಾರೆ.</p>.<p>ಗುವಾಹಟಿಯ ಪಂಚತಾರಾ ಹೋಟೆಲ್ ಹಾಗೂ ರೆಸಾರ್ಟ್ ‘ರಾಡಿಸನ್ ಬ್ಲೂ ಹೋಟೆಲ್’ನಲ್ಲಿ ಶಾಸಕರು ತಂಗಿದ್ದಾರೆ. ಇವರಿಗೆ ಅಸ್ಸಾಂ ಸರ್ಕಾರ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಿದೆ.</p>.<p>ಇನ್ನೊಂದೆಡೆ ಅಸ್ಸಾಂನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ವ್ಯಾಪಕ ಮಳೆಗೆ ಪ್ರವಾಹ ಉಂಟಾಗಿ 89ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 50 ಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಎನ್ಡಿಆರ್ಎಫ್ ಸೇರಿದಂತೆ ಅನೇಕ ಪರಿಹಾರ ಕಾರ್ಯಾಚರಣೆ ತಂಡಗಳು ಸ್ಥಳದಲ್ಲಿ ಬೀಡು ಬಿಟ್ಟಿವೆ.</p>.<p>ಆದರೆ, ಮಹಾರಾಷ್ಟ್ರ ಶಾಸಕರ ಜೊತೆ ಹೋಟೆಲ್ನಲ್ಲಿ ತಂಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ಅಸ್ಸಾಂ ಜನರೂ ಸೇರಿದಂತೆ ವಿರೋಧ ಪಕ್ಷಗಳಿಂದ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.</p>.<p>‘ಅಸ್ಸಾಂನಲ್ಲಿ ಪ್ರವಾಹ ಬಂದು ಜನ ಸಾಯುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಸಿಎಂ ಶರ್ಮಾ ಮಹಾರಾಷ್ಟ್ರ ಶಾಸಕರ ಜೊತೆ ಸೇರಿಕೊಂಡು ಹೋಟೆಲ್ನಲ್ಲಿ ಮಜಾ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಾಡಿಸನ್ ಹೋಟೆಲ್ ಮುಂದೆ ಅಸ್ಸಾಂ ಟಿಎಂಸಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.</p>.<p>ಅಸ್ಸಾಂ ರಾಜ್ಯ ಟಿಎಂಸಿ ಅಧ್ಯಕ್ಷ ರಿಪುರ್ ಬೋರಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಸಿಎಂ ಶರ್ಮಾ ಅವರು ಶಿವಸೇನೆ ಶಾಸಕರಿಗೆ ರಾಜಾತಿಥ್ಯವನ್ನು ಸಾರ್ವಜನಿಕ ತೆರಿಗೆ ಹಣದಲ್ಲಿ ನೀಡುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಆರೋಪಿಸಿದೆ.</p>.<p>ಇನ್ನು ಶಿವಸೇನೆ ಶಾಸಕ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಹೋಟೆಲ್ನಲ್ಲಿ ತಂಗಿರುವ ಶಾಸಕರನ್ನು ಅಸ್ಸಾಂ ಸಚಿವರು, ಬಿಜೆಪಿ ನಾಯಕರು ಭೇಟಿಯಾಗುತ್ತಿದ್ದಾರೆ. ಇತ್ತ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ದಾವಂತರದಲ್ಲಿರುವ ಬಿಜೆಪಿ, ಶಿಂಧೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ವರದಿಯಾಗಿದೆ.</p>.<p><a href="https://www.prajavani.net/india-news/mva-an-unnatural-alliance-shiv-sena-must-walk-out-of-it-says-rebel-leader-shinde-947995.html" itemprop="url">ಕಾಂಗ್ರೆಸ್, ಎನ್ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಶಿವಸೇನಾದ 34 ಶಾಸಕರು ಹಾಗೂ 8 ಪಕ್ಷೇತರ ಶಾಸಕರು ಮಹಾ ವಿಕಾಸ್ ಅಗಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಎದ್ದು, ದೂರದ ಅಸ್ಸಾಂನಲ್ಲಿ ಹೋಗಿ ಕುಳಿತಿದ್ದಾರೆ.</p>.<p>ಗುವಾಹಟಿಯ ಪಂಚತಾರಾ ಹೋಟೆಲ್ ಹಾಗೂ ರೆಸಾರ್ಟ್ ‘ರಾಡಿಸನ್ ಬ್ಲೂ ಹೋಟೆಲ್’ನಲ್ಲಿ ಶಾಸಕರು ತಂಗಿದ್ದಾರೆ. ಇವರಿಗೆ ಅಸ್ಸಾಂ ಸರ್ಕಾರ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಿದೆ.</p>.<p>ಇನ್ನೊಂದೆಡೆ ಅಸ್ಸಾಂನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ವ್ಯಾಪಕ ಮಳೆಗೆ ಪ್ರವಾಹ ಉಂಟಾಗಿ 89ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 50 ಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಎನ್ಡಿಆರ್ಎಫ್ ಸೇರಿದಂತೆ ಅನೇಕ ಪರಿಹಾರ ಕಾರ್ಯಾಚರಣೆ ತಂಡಗಳು ಸ್ಥಳದಲ್ಲಿ ಬೀಡು ಬಿಟ್ಟಿವೆ.</p>.<p>ಆದರೆ, ಮಹಾರಾಷ್ಟ್ರ ಶಾಸಕರ ಜೊತೆ ಹೋಟೆಲ್ನಲ್ಲಿ ತಂಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ಅಸ್ಸಾಂ ಜನರೂ ಸೇರಿದಂತೆ ವಿರೋಧ ಪಕ್ಷಗಳಿಂದ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.</p>.<p>‘ಅಸ್ಸಾಂನಲ್ಲಿ ಪ್ರವಾಹ ಬಂದು ಜನ ಸಾಯುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಸಿಎಂ ಶರ್ಮಾ ಮಹಾರಾಷ್ಟ್ರ ಶಾಸಕರ ಜೊತೆ ಸೇರಿಕೊಂಡು ಹೋಟೆಲ್ನಲ್ಲಿ ಮಜಾ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಾಡಿಸನ್ ಹೋಟೆಲ್ ಮುಂದೆ ಅಸ್ಸಾಂ ಟಿಎಂಸಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.</p>.<p>ಅಸ್ಸಾಂ ರಾಜ್ಯ ಟಿಎಂಸಿ ಅಧ್ಯಕ್ಷ ರಿಪುರ್ ಬೋರಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಸಿಎಂ ಶರ್ಮಾ ಅವರು ಶಿವಸೇನೆ ಶಾಸಕರಿಗೆ ರಾಜಾತಿಥ್ಯವನ್ನು ಸಾರ್ವಜನಿಕ ತೆರಿಗೆ ಹಣದಲ್ಲಿ ನೀಡುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಆರೋಪಿಸಿದೆ.</p>.<p>ಇನ್ನು ಶಿವಸೇನೆ ಶಾಸಕ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಹೋಟೆಲ್ನಲ್ಲಿ ತಂಗಿರುವ ಶಾಸಕರನ್ನು ಅಸ್ಸಾಂ ಸಚಿವರು, ಬಿಜೆಪಿ ನಾಯಕರು ಭೇಟಿಯಾಗುತ್ತಿದ್ದಾರೆ. ಇತ್ತ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ದಾವಂತರದಲ್ಲಿರುವ ಬಿಜೆಪಿ, ಶಿಂಧೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ವರದಿಯಾಗಿದೆ.</p>.<p><a href="https://www.prajavani.net/india-news/mva-an-unnatural-alliance-shiv-sena-must-walk-out-of-it-says-rebel-leader-shinde-947995.html" itemprop="url">ಕಾಂಗ್ರೆಸ್, ಎನ್ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>