ಪ್ರವಾಹದಲ್ಲಿ ಅಸ್ಸಾಂ ಜನ– ಮಹಾ ಶಾಸಕರ ಜೊತೆ ಹೋಟೆಲ್ನಲ್ಲಿ ಸಿಎಂ ಶರ್ಮಾ: ಟಿಎಂಸಿ

ಗುವಾಹಟಿ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಶಿವಸೇನಾದ 34 ಶಾಸಕರು ಹಾಗೂ 8 ಪಕ್ಷೇತರ ಶಾಸಕರು ಮಹಾ ವಿಕಾಸ್ ಅಗಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಎದ್ದು, ದೂರದ ಅಸ್ಸಾಂನಲ್ಲಿ ಹೋಗಿ ಕುಳಿತಿದ್ದಾರೆ.
ಗುವಾಹಟಿಯ ಪಂಚತಾರಾ ಹೋಟೆಲ್ ಹಾಗೂ ರೆಸಾರ್ಟ್ ‘ರಾಡಿಸನ್ ಬ್ಲೂ ಹೋಟೆಲ್’ನಲ್ಲಿ ಶಾಸಕರು ತಂಗಿದ್ದಾರೆ. ಇವರಿಗೆ ಅಸ್ಸಾಂ ಸರ್ಕಾರ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಿದೆ.
ಇನ್ನೊಂದೆಡೆ ಅಸ್ಸಾಂನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ವ್ಯಾಪಕ ಮಳೆಗೆ ಪ್ರವಾಹ ಉಂಟಾಗಿ 89ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 50 ಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಎನ್ಡಿಆರ್ಎಫ್ ಸೇರಿದಂತೆ ಅನೇಕ ಪರಿಹಾರ ಕಾರ್ಯಾಚರಣೆ ತಂಡಗಳು ಸ್ಥಳದಲ್ಲಿ ಬೀಡು ಬಿಟ್ಟಿವೆ.
ಆದರೆ, ಮಹಾರಾಷ್ಟ್ರ ಶಾಸಕರ ಜೊತೆ ಹೋಟೆಲ್ನಲ್ಲಿ ತಂಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ಅಸ್ಸಾಂ ಜನರೂ ಸೇರಿದಂತೆ ವಿರೋಧ ಪಕ್ಷಗಳಿಂದ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
‘ಅಸ್ಸಾಂನಲ್ಲಿ ಪ್ರವಾಹ ಬಂದು ಜನ ಸಾಯುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಸಿಎಂ ಶರ್ಮಾ ಮಹಾರಾಷ್ಟ್ರ ಶಾಸಕರ ಜೊತೆ ಸೇರಿಕೊಂಡು ಹೋಟೆಲ್ನಲ್ಲಿ ಮಜಾ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಾಡಿಸನ್ ಹೋಟೆಲ್ ಮುಂದೆ ಅಸ್ಸಾಂ ಟಿಎಂಸಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.
#WATCH | Members and workers of Assam unit of TMC protest outside Radisson Blu Hotel in Guwahati where rebel Maharashtra MLAs, including Shiv Sena's Eknath Shinde, are staying.
Party's state president Ripun Bora is leading the protest here. pic.twitter.com/rfoD0fQSKU
— ANI (@ANI) June 23, 2022
ಅಸ್ಸಾಂ ರಾಜ್ಯ ಟಿಎಂಸಿ ಅಧ್ಯಕ್ಷ ರಿಪುರ್ ಬೋರಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಸಿಎಂ ಶರ್ಮಾ ಅವರು ಶಿವಸೇನೆ ಶಾಸಕರಿಗೆ ರಾಜಾತಿಥ್ಯವನ್ನು ಸಾರ್ವಜನಿಕ ತೆರಿಗೆ ಹಣದಲ್ಲಿ ನೀಡುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಆರೋಪಿಸಿದೆ.
ಇನ್ನು ಶಿವಸೇನೆ ಶಾಸಕ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಹೋಟೆಲ್ನಲ್ಲಿ ತಂಗಿರುವ ಶಾಸಕರನ್ನು ಅಸ್ಸಾಂ ಸಚಿವರು, ಬಿಜೆಪಿ ನಾಯಕರು ಭೇಟಿಯಾಗುತ್ತಿದ್ದಾರೆ. ಇತ್ತ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ದಾವಂತರದಲ್ಲಿರುವ ಬಿಜೆಪಿ, ಶಿಂಧೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ವರದಿಯಾಗಿದೆ.
ಕಾಂಗ್ರೆಸ್, ಎನ್ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.