ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘೇಂಡಾಮೃಗ ಕೊಂಬುಗಳ ದಹನಕ್ಕೆ ಅಸ್ಸಾಂ ಸರ್ಕಾರ ನಿರ್ಧಾರ; ಕಾರಣ ಏನು?

ವನ್ಯಮೃಗದ ಬೇಟೆ, ಕಳ್ಳಸಾಗಣೆಗೆ ಕಡಿವಾಣ ಉದ್ದೇಶ
Last Updated 16 ಸೆಪ್ಟೆಂಬರ್ 2021, 15:40 IST
ಅಕ್ಷರ ಗಾತ್ರ

ಗುವಾಹಟಿ: ರಾಜ್ಯದ ಸಂಗ್ರಹಾಗಾರಗಳಲ್ಲಿರುವ, ಘೇಂಡಾಮೃಗಗಳ 2,479 ಕೊಂಬುಗಳನ್ನು ಸುಡಬೇಕು ಎಂಬ ಪ್ರಸ್ತಾವನೆಗೆ ಅಸ್ಸಾಂ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಅನುಮೋದನೆ ನೀಡಿತು.

ಘೇಂಡಾಮೃಗದ ಕೊಂಬಿನಲ್ಲಿ ಔಷಧೀಯ ಗುಣಗಳಿವೆ ಎಂಬ ನಂಬಿಕೆ ಇದೆ. ಕೊಂಬುಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸಹ ಭಾರಿ ಬೇಡಿಕೆ. ಈ ಕಾರಣಕ್ಕೆ ಈ ಪ್ರಾಣಿಗಳ ಕಳ್ಳಬೇಟೆಅಸ್ಸಾಂನಲ್ಲಿ ಅಧಿಕ.

‘ಘೇಂಡಾಮೃಗಗಳ ಹತ್ಯೆ ಮತ್ತು ಕೊಂಬುಗಳ ಕಳ್ಳಸಾಗಣೆಗೆ ಕಡಿವಾಣ ಹಾಕುವ ಸಲುವಾಗಿ ಸರ್ಕಾರದ ಸಂಗ್ರಹದಲ್ಲಿರುವ ಕೊಂಬುಗಳನ್ನು ಸುಡಲು ನಿರ್ಧರಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

‘ಒಟ್ಟು 2,623 ಕೊಂಬುಗಳ ದಾಸ್ತಾನಿದೆ. ಈ ಕೊಂಬುಗಳ ಬಳಕೆ ಬಗ್ಗೆ ಜನರಲ್ಲಿ ಮನೆ ಮಾಡಿರುವ ಮೌಢ್ಯವನ್ನು ಹೋಗಲಾಡಿಸುವ ಉದ್ದೇಶದಿಂದ 2,479 ಕೊಂಬುಗಳನ್ನು ಸಾರ್ವಜನಿಕವಾಗಿಯೇ ಸುಡಲಾಗುವುದು. ಉಳಿದ 94 ಕೊಂಬುಗಳನ್ನು ಅಧ್ಯಯನ ಹಾಗೂ ಪಾರಂಪರಿಕ ದೃಷ್ಟಿಯಿಂದ ಸಂರಕ್ಷಿಸಿಡಲಾಗುವುದು. ಇನ್ನುಳಿದ 50 ಕೊಂಬುಗಳನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗಾಗಿ ಉಳಿಸಿಕೊಳ್ಳಲಾಗುವುದು’ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT