<p><strong>ಗುವಾಹಟಿ:</strong> ಈ ವರ್ಷದ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲುಸಾಧ್ಯತೆ ಇರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರಲಿದ್ದು, ರಾಜ್ಯದ ಜನತೆಯ ಎಲ್ಲ ನಿರೀಕ್ಷೆಗಳನ್ನು ಈಡೇರಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಶನಿವಾರ ಹೇಳಿದ್ದಾರೆ.</p>.<p>ಪ್ರಸ್ತುತ ವಿಧಾನಸಭೆಯ ಕೊನೆಯ ಅಧಿವೇಶನದ ಮುಕ್ತಾಯದ ದಿನದಂದು ನಡೆದ ರಾಜ್ಯಪಾಲರ ಭಾಷಣದ ಚರ್ಚೆಗೆ ಉತ್ತರಿಸಿದ ಸೋನೊವಾಲ್, ಕಳೆದ ಐದು ವರ್ಷಗಳಲ್ಲಿ ಮಾಡಿದ 'ಉತ್ತಮ ಕಾರ್ಯ'ದಿಂದಾಗಿ ಆಡಳಿತಾರೂಢ ಮೈತ್ರಿಸರ್ಕಾರವೇ ಜಯ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ರಾಜ್ಯದ ಎಲ್ಲಾ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಭಿವೃದ್ಧಿಗಾಗಿ ನಾವು ಕಠಿಣ ಪರಿಶ್ರಮ ವಹಿಸಿದ್ದೇವೆ ಮತ್ತು ಎಲ್ಲ ಜನರಿಗೂ ಸಮಾನವಾದ ಗೌರವವನ್ನು ನೀಡಿದ್ದೇವೆ. ನಾವು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇವೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ' ಎಂದು ಅವರು ಹೇಳಿದರು.</p>.<p>ಅಸ್ಸಾಂನಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ನೇತೃತ್ವದ ಮೊದಲ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದ ಮುಖ್ಯಮಂತ್ರಿ, ಎಲ್ಲಾ ಕ್ಷೇತ್ರಗಳಲ್ಲಿನ ಸಹಕಾರಕ್ಕಾಗಿ ರಾಜ್ಯದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು.</p>.<p>ಸೋನೊವಾಲ್ ಅವರ ಭಾಷಣದ ನಂತರ, ಸದನವು ಏಪ್ರಿಲ್ನಿಂದ ಸೆಪ್ಟೆಂಬರ್ ವರೆಗೆ ಆರು ತಿಂಗಳ ಅವಧಿಗೆ ₹ 60,784.03 ಕೋಟಿಗಳ 2021-22ರ ಬಜೆಟ್ ಅನ್ನು ಅಂಗೀಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಈ ವರ್ಷದ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲುಸಾಧ್ಯತೆ ಇರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರಲಿದ್ದು, ರಾಜ್ಯದ ಜನತೆಯ ಎಲ್ಲ ನಿರೀಕ್ಷೆಗಳನ್ನು ಈಡೇರಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಶನಿವಾರ ಹೇಳಿದ್ದಾರೆ.</p>.<p>ಪ್ರಸ್ತುತ ವಿಧಾನಸಭೆಯ ಕೊನೆಯ ಅಧಿವೇಶನದ ಮುಕ್ತಾಯದ ದಿನದಂದು ನಡೆದ ರಾಜ್ಯಪಾಲರ ಭಾಷಣದ ಚರ್ಚೆಗೆ ಉತ್ತರಿಸಿದ ಸೋನೊವಾಲ್, ಕಳೆದ ಐದು ವರ್ಷಗಳಲ್ಲಿ ಮಾಡಿದ 'ಉತ್ತಮ ಕಾರ್ಯ'ದಿಂದಾಗಿ ಆಡಳಿತಾರೂಢ ಮೈತ್ರಿಸರ್ಕಾರವೇ ಜಯ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ರಾಜ್ಯದ ಎಲ್ಲಾ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಭಿವೃದ್ಧಿಗಾಗಿ ನಾವು ಕಠಿಣ ಪರಿಶ್ರಮ ವಹಿಸಿದ್ದೇವೆ ಮತ್ತು ಎಲ್ಲ ಜನರಿಗೂ ಸಮಾನವಾದ ಗೌರವವನ್ನು ನೀಡಿದ್ದೇವೆ. ನಾವು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇವೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ' ಎಂದು ಅವರು ಹೇಳಿದರು.</p>.<p>ಅಸ್ಸಾಂನಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ನೇತೃತ್ವದ ಮೊದಲ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದ ಮುಖ್ಯಮಂತ್ರಿ, ಎಲ್ಲಾ ಕ್ಷೇತ್ರಗಳಲ್ಲಿನ ಸಹಕಾರಕ್ಕಾಗಿ ರಾಜ್ಯದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು.</p>.<p>ಸೋನೊವಾಲ್ ಅವರ ಭಾಷಣದ ನಂತರ, ಸದನವು ಏಪ್ರಿಲ್ನಿಂದ ಸೆಪ್ಟೆಂಬರ್ ವರೆಗೆ ಆರು ತಿಂಗಳ ಅವಧಿಗೆ ₹ 60,784.03 ಕೋಟಿಗಳ 2021-22ರ ಬಜೆಟ್ ಅನ್ನು ಅಂಗೀಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>