<div><p><strong>ಗುವಾಹಟಿ:</strong> ಸರ್ಕಾರಿ ಜಾಗವನ್ನು ಅತಿಕ್ರಮಿಸಿಕೊಂಡು ತಲೆ ಎತ್ತಿರುವ ಅಕ್ರಮ ಗುಡಿಸಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶನಿವಾರ ತಿಳಿಸಿದ್ದಾರೆ.</p><p>ಅಸ್ಸಾಂನ ದರಾಂಗ್ ಜಿಲ್ಲೆಯಲ್ಲಿ ಗುರುವಾರ ಒತ್ತುವರಿ ತೆರವುಗೊಳಿಸುವ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ನಿಂದ ಇಬ್ಬರು ಮೃತಪಟ್ಟಿದ್ದು, ತೆರವು ಕಾರ್ಯಾಚರಣೆಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಹಿಮಂತ ಬಿಸ್ವಾ ಶರ್ಮಾ ತಮ್ಮ ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ.</p><p>‘ಈ ಕಾರ್ಯಾಚರಣೆ ಮುಂದುವರಿಯುತ್ತದೆ. ಸರ್ಕಾರವು ಬಡ ಮತ್ತು ಭೂಹೀನ ಜನರ ಸಮಸ್ಯೆಗಳನ್ನು ಆಲಿಸಲಿದೆ. ಆದರೆ, ನಾವು ಒಬ್ಬ ವ್ಯಕ್ತಿ 100 ಬಿಘಾ, 200 ಬಿಘಾ ಸರ್ಕಾರಿ ಭೂಮಿಯನ್ನು ಆಕ್ರಮಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ನಮ್ಮ ಭೂ ಬಳಕೆಯ ನೀತಿಯ ಮಾನದಂಡದ ಪ್ರಕಾರ 6 ಬಿಘಾ ಭೂಮಿಯನ್ನು ನಿಜವಾದ ಭೂ ರಹಿತ ಜನರಿಗೆ ನೀಡುತ್ತೇವೆ. ಆದರೆ ಜನರು ಸರ್ಕಾರಿ ಭೂಮಿಯನ್ನು ಆಕ್ರಮಿಸಿಕೊಳ್ಳಲು ಅವಕಾಶ ನೀಡುವುದಿಲ್ಲ’ ಎಂದು ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.</p><p><strong>ಪಿತೂರಿ ಸಿದ್ಧಾಂತ:</strong>‘ಒಂದು ವರ್ಗದ ಜನರ’ನ್ನು ತೆರವುಗೊಳಿಸುವುದನ್ನು ನಿಲ್ಲಿಸುವಂತೆ ಸರ್ಕಾರಕ್ಕೆ ಮನದಟ್ಟು ಮಾಡುವ ಭರವಸೆ ನೀಡಿ, ಕಳೆದ ಮೂರು ತಿಂಗಳಲ್ಲಿ ಆ ಜನರಿಂದ ₹28 ಲಕ್ಷ ಹಣವನ್ನು ಕೆಲವರು ಸಂಗ್ರಹಿಸಿರುವುದು ಸರ್ಕಾರಕ್ಕೆ ಗುಪ್ತಚರ ಇಲಾಖೆಯ ಮಾಹಿತಿಯಿಂದ ತಿಳಿದುಬಂದಿದೆ. ತೆರವು ಕಾರ್ಯಾಚರಣೆ ತಡೆಯಲು ಸಾಧ್ಯವಾಗದಿದ್ದಾಗ ಅವರು ಆ ಜನರನ್ನು ಎತ್ತಿಕಟ್ಟಿ ಗುರುವಾರ ವಿನಾಶ ಸೃಷ್ಟಿಸಿದರು. ಇದರಲ್ಲಿ ಪಿತೂರಿ ಸಿದ್ಧಾಂತ ಅಡಗಿದೆ ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.</p><p>ಗುರುವಾರ ಕೇವಲ 60 ಕುಟುಂಬಗಳನ್ನು ತೆರವುಗೊಳಿಸಲಾಗಿತ್ತು. ಆದರೆ, ತೆರವು ಕಾರ್ಯಾಚರಣೆ ವಿರೋಧಿಸಲು10,000 ಜನರು ಜಮಾಯಿಸಿದರು. ತೆರವುಗೊಳಿಸಲಾಗಿದ್ದ ಜನರಿಗೆ ಆಹಾರ ನೀಡುವ ನೆಪದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಇಸ್ಲಾಮಿಕ್ ಸಂಘಟನೆಗೆ ಸೇರಿದವರು ಈ ಪ್ರದೇಶಕ್ಕೆ ಭೇಟಿ ನೀಡಿರುವ ಬಗ್ಗೆ ಮಾಹಿತಿಯೂ ಸಿಕ್ಕಿದೆ. ಸರ್ಕಾರ ಈ ಬಗ್ಗೆ ತನಿಖೆ ನಡೆಸಲಿದೆ. ತನಿಖೆಯಿಂದ ಸ್ಫೋಟಕ ಮಾಹಿತಿಗಳು ಹೊರಬೀಳಲಿವೆ ಎಂದು ಶರ್ಮಾ ಹೇಳಿದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div><p><strong>ಗುವಾಹಟಿ:</strong> ಸರ್ಕಾರಿ ಜಾಗವನ್ನು ಅತಿಕ್ರಮಿಸಿಕೊಂಡು ತಲೆ ಎತ್ತಿರುವ ಅಕ್ರಮ ಗುಡಿಸಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶನಿವಾರ ತಿಳಿಸಿದ್ದಾರೆ.</p><p>ಅಸ್ಸಾಂನ ದರಾಂಗ್ ಜಿಲ್ಲೆಯಲ್ಲಿ ಗುರುವಾರ ಒತ್ತುವರಿ ತೆರವುಗೊಳಿಸುವ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ನಿಂದ ಇಬ್ಬರು ಮೃತಪಟ್ಟಿದ್ದು, ತೆರವು ಕಾರ್ಯಾಚರಣೆಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಹಿಮಂತ ಬಿಸ್ವಾ ಶರ್ಮಾ ತಮ್ಮ ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ.</p><p>‘ಈ ಕಾರ್ಯಾಚರಣೆ ಮುಂದುವರಿಯುತ್ತದೆ. ಸರ್ಕಾರವು ಬಡ ಮತ್ತು ಭೂಹೀನ ಜನರ ಸಮಸ್ಯೆಗಳನ್ನು ಆಲಿಸಲಿದೆ. ಆದರೆ, ನಾವು ಒಬ್ಬ ವ್ಯಕ್ತಿ 100 ಬಿಘಾ, 200 ಬಿಘಾ ಸರ್ಕಾರಿ ಭೂಮಿಯನ್ನು ಆಕ್ರಮಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ನಮ್ಮ ಭೂ ಬಳಕೆಯ ನೀತಿಯ ಮಾನದಂಡದ ಪ್ರಕಾರ 6 ಬಿಘಾ ಭೂಮಿಯನ್ನು ನಿಜವಾದ ಭೂ ರಹಿತ ಜನರಿಗೆ ನೀಡುತ್ತೇವೆ. ಆದರೆ ಜನರು ಸರ್ಕಾರಿ ಭೂಮಿಯನ್ನು ಆಕ್ರಮಿಸಿಕೊಳ್ಳಲು ಅವಕಾಶ ನೀಡುವುದಿಲ್ಲ’ ಎಂದು ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.</p><p><strong>ಪಿತೂರಿ ಸಿದ್ಧಾಂತ:</strong>‘ಒಂದು ವರ್ಗದ ಜನರ’ನ್ನು ತೆರವುಗೊಳಿಸುವುದನ್ನು ನಿಲ್ಲಿಸುವಂತೆ ಸರ್ಕಾರಕ್ಕೆ ಮನದಟ್ಟು ಮಾಡುವ ಭರವಸೆ ನೀಡಿ, ಕಳೆದ ಮೂರು ತಿಂಗಳಲ್ಲಿ ಆ ಜನರಿಂದ ₹28 ಲಕ್ಷ ಹಣವನ್ನು ಕೆಲವರು ಸಂಗ್ರಹಿಸಿರುವುದು ಸರ್ಕಾರಕ್ಕೆ ಗುಪ್ತಚರ ಇಲಾಖೆಯ ಮಾಹಿತಿಯಿಂದ ತಿಳಿದುಬಂದಿದೆ. ತೆರವು ಕಾರ್ಯಾಚರಣೆ ತಡೆಯಲು ಸಾಧ್ಯವಾಗದಿದ್ದಾಗ ಅವರು ಆ ಜನರನ್ನು ಎತ್ತಿಕಟ್ಟಿ ಗುರುವಾರ ವಿನಾಶ ಸೃಷ್ಟಿಸಿದರು. ಇದರಲ್ಲಿ ಪಿತೂರಿ ಸಿದ್ಧಾಂತ ಅಡಗಿದೆ ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.</p><p>ಗುರುವಾರ ಕೇವಲ 60 ಕುಟುಂಬಗಳನ್ನು ತೆರವುಗೊಳಿಸಲಾಗಿತ್ತು. ಆದರೆ, ತೆರವು ಕಾರ್ಯಾಚರಣೆ ವಿರೋಧಿಸಲು10,000 ಜನರು ಜಮಾಯಿಸಿದರು. ತೆರವುಗೊಳಿಸಲಾಗಿದ್ದ ಜನರಿಗೆ ಆಹಾರ ನೀಡುವ ನೆಪದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಇಸ್ಲಾಮಿಕ್ ಸಂಘಟನೆಗೆ ಸೇರಿದವರು ಈ ಪ್ರದೇಶಕ್ಕೆ ಭೇಟಿ ನೀಡಿರುವ ಬಗ್ಗೆ ಮಾಹಿತಿಯೂ ಸಿಕ್ಕಿದೆ. ಸರ್ಕಾರ ಈ ಬಗ್ಗೆ ತನಿಖೆ ನಡೆಸಲಿದೆ. ತನಿಖೆಯಿಂದ ಸ್ಫೋಟಕ ಮಾಹಿತಿಗಳು ಹೊರಬೀಳಲಿವೆ ಎಂದು ಶರ್ಮಾ ಹೇಳಿದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>