ಉತ್ತರ ಪ್ರದೇಶದಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಸಿಎಂ ಆಗಿ ಪುನರಾಯ್ಕೆಯಾಗಿದ್ದಾರೆ.
ಉತ್ತರಾಖಂಡದಲ್ಲಿ ಮತ್ತೆ ಕಮಲ ಪತಾಕೆ ಹಾರಿದೆ.
ಈಶಾನ್ಯ ರಾಜ್ಯ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು 92 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ 18 ಸ್ಥಾನ ಪಡೆದಿದ್ದು, ಬಾರಿ ಹಿನ್ನಡೆ ಅನುಭವಿಸಿದೆ.
ಗೋವಾದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚಿಸುವುದು ಖಚಿತವೆನಿಸಿದೆ.
ದೇಶದಲ್ಲಿ ವಂಶಪರಂಪರೆಯ ರಾಜಕೀಯದಲ್ಲಿ ಸೂರ್ಯಾಸ್ತದ ದಿನ ಬಂದೇ ಬರುತ್ತದೆ. ಈ ಫಲಿತಾಂಶಗಳಲ್ಲೂ ಜನರು ಇದನ್ನೇ ಸೂಚಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಹೇಳಿಕೆ
*ಬಿಜೆಪಿಗೆ ಎಲ್ಲ ವಿಭಾಗದ ಜನರಿಂದ ಬೆಂಬಲ ದೊರಕಿದೆ. ಉತ್ತರ ಪ್ರದೇಶದ ಚುನಾವಣೆ ಫಲಿತಾಂಶವು 2024ರ ಲೋಕಸಭಾ ಚುನಾವಣೆಯ ಭವಿಷ್ಯವನ್ನು ನಿರ್ಧರಿಸಿದೆ ಎಂದು ಹೇಳಿದ್ದಾರೆ.
*ಚುನಾವಣೆ ಫಲಿತಾಂಶವು ಬಿಜೆಪಿ ಬಡವರ ಪರವಾಗಿದೆ ಎಂಬುದನ್ನು ಮುದ್ರೆ ಒತ್ತಿದೆ. ಬಡವರು ತಮ್ಮ ಹಕ್ಕುಗಳನ್ನು ಪಡೆಯುವವರೆಗೂ ನಾವು ವಿಶ್ರಮಿಸುವುದಿಲ್ಲ. ಪ್ರತಿಯೊಬ್ಬ ಬಡವರು ಮತ್ತು ಅರ್ಹರನ್ನು ನಾವು ತಲುಪಲಿದ್ದೇವೆ: ಪ್ರಧಾನಿ ಮೋದಿ
*ಪ್ರತ್ಯೇಕತಾವಾದಿ ರಾಜಕೀಯದಿಂದ ಗಡಿ ರಾಜ್ಯವಾದ ಪಂಜಾಬ್ ಅನ್ನು ರಕ್ಷಿಸಲು ಬಿಜೆಪಿ ಕಾರ್ಯಕರ್ತರು ಶ್ರಮಿಸಲಿದ್ದಾರೆ.: ಮೋದಿ
ಸಾವಿರಾರು ಭಾರತೀಯ ವಿದ್ಯಾರ್ಥಿಗಳು, ನಾಗರಿಕರು ಉಕ್ರೇನ್ನಲ್ಲಿ ಸಿಲುಕಿದ್ದಾರೆ. ಆದರೆ ದೇಶದ ನೈತಿಕ ಸ್ಥೈರ್ಯವನ್ನು ಮುರಿಯುವ ಪ್ರಯತ್ನ ನಡೆಯುತ್ತಿರುವುದು ದುರದೃಷ್ಟಕರ. ಈ ಜನರು ಸಹ 'ಆಪರೇಷನ್ ಗಂಗಾ' ದುರುಪಯೋಗಪಡಿಸಲು ಪ್ರಯತ್ನಿಸಿದರು. ಇದು ಭಾರತದ ಭವಿಷ್ಯಕ್ಕೂ ಎದುರಾಗುತ್ತಿರುವ ದೊಡ್ಡ ಆತಂಕ: ಪ್ರಧಾನಿ ಮೋದಿ
ನಾನು ಕೆಲವು ಕಾಳಜಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ಸಾಮಾನ್ಯ ಜನರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಕೆಲವರು ರಾಜಕೀಯದ ಗುಣಮಟ್ಟವನ್ನು ಕುಂಠಿತಗೊಳಿಸುತ್ತಿದ್ದಾರೆ. ನಮ್ಮ ಲಸಿಕಾ ಕಾರ್ಯಕ್ರಮವನ್ನು ಇಡೀ ಜಗತ್ತೇ ಶ್ಲಾಘಿಸಿದರೆ ಕೆಲವರು ಪ್ರಶ್ನಿಸುತ್ತಿದ್ದರು: ಪ್ರಧಾನಿ ಮೋದಿ
2019ರಲ್ಲಿ ನಾವು ಕೇಂದ್ರದಲ್ಲಿ ಸರ್ಕಾರ ರಚಿಸಿದಾಗ ಅದು 2017ರ ಉತ್ತರ ಪ್ರದೇಶದ ಗೆಲುವಿನ ಪರಿಣಾಮ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದರು. ಈಗ 2022ರ ಚುನಾವಣಾ ಫಲಿತಾಂಶವು 2024ರ ಲೋಕಸಭಾ ಚುನಾವಣೆಯ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಅದೇ ತಜ್ಞರು ಭವಿಷ್ಯ ನುಡಿಯಲಿದ್ದಾರೆ ಎಂದು ನಾನು ನಂಬುತ್ತೇನೆ: ಪ್ರಧಾನಿ ಮೋದಿ