ಈ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅಮರಿಂದರ್ ಸಿಂಗ್, ‘ಕಾಂಗ್ರೆಸ್ ನಾಯಕತ್ವವು ಬುದ್ಧಿ ಕಲಿಯುವುದಿಲ್ಲ. ಯುಪಿಯಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿಗೆ ಯಾರು ಹೊಣೆ? ಮಣಿಪುರ, ಗೋವಾ, ಉತ್ತರಾಖಂಡದ ಕುರಿತು ಏನು ಹೇಳುತ್ತಾರೆ? ಇದಕ್ಕೆ ಉತ್ತರವನ್ನು ಗೋಡೆಯ ಮೇಲೆ ದೊಡ್ಡ ಅಕ್ಷರಗಳಲ್ಲಿ ಬರೆಯಲಾಗಿದೆ. ಆದರೆ, ಯಾವಾಗಲೂ ಅವರು(ಕಾಂಗ್ರೆಸ್ ನಾಯಕತ್ವ) ಉತ್ತರವನ್ನು ಅರಿಯುವ ಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಾರೆ’ ಎಂದು ಟ್ವೀಟಿಸಿದ್ದಾರೆ.