ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ.
ಆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ.
‘ಉತ್ತಮ ಆಡಳಿತ, ಭದ್ರತೆ ಮತ್ತು ರಾಷ್ಟ್ರೀಯತೆಗೆ ಈ ಗೆಲುವು ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು ಖಚಿತವಾಗಿದೆ’ ಎಂದು ಹೇಳಿದ್ದಾರೆ.
‘ಈ ಬಹುಮತವು, ಪ್ರಧಾನಿ ಮೋದಿಯವರ ನೀತಿಗಳ ಮೇಲೆ ಸಾಮಾನ್ಯ ಜನರ ಅಚಲ ನಂಬಿಕೆಯ ಮುದ್ರೆಯಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಮೈತ್ರಿಕೂಟ 221 ಸ್ಥಾನಗಳನ್ನು ಗೆದ್ದು, 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.