ನವದೆಹಲಿ: ಐದು ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋಲು ಕಂಡಿದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಕೆಲ ರಾಷ್ಟ್ರೀಯ ಮುಖಂಡರು ತಮ್ಮ ಪಕ್ಷದ ನಾಯಕತ್ವದ ವಿರುದ್ಧ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನ ಭಿನ್ನಮತೀಯ ನಾಯಕರೆಂದು ಗುರುತಿಸಲ್ಪಟ್ಟಿರುವ ಕಪಿಲ್ ಸಿಬಲ್, ಮನೀಶ್ ತಿವಾರಿ ಅವರು ದೆಹಲಿಯಲ್ಲಿರುವ ಗುಲಾಂ ನಬಿ ಆಜಾದ್ ಮನೆಗೆ ಶುಕ್ರವಾರ ಸಂಜೆ ಭೇಟಿ ನೀಡಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
Delhi | Senior Congress leaders Manish Tewari and Kapil Sibal arrive at the residence of party leader Ghulam Nabi Azad. pic.twitter.com/SPEKtAPw4t