ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ರಾಜ್ಯಗಳ ಚುನಾವಣೆ ಸೋಲು: ಆತ್ಮಾವಲೋಕನಕ್ಕೆ ಶೀಘ್ರವೇ ಸಿಡಬ್ಲ್ಯೂಸಿ ಸಭೆ

Last Updated 10 ಮಾರ್ಚ್ 2022, 21:44 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್, ಉತ್ತರಾಖಂಡ, ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎದುರಾಗಿರುವ ಅನಿರೀಕ್ಷಿತ ಸೋಲಿನ ಕುರಿತು ಚರ್ಚಿಸಲು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶೀಘ್ರವೇ ಪಕ್ಷದ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆ ಕರೆಯುವ ಸಾಧ್ಯತೆ ಇದೆ.

ಪಂಜಾಬ್‌ನಲ್ಲಿ ಪಕ್ಷ ಅಧಿಕಾರ ಕಳೆದುಕೊಳ್ಳಲು ಅಮರಿಂದರ್ ಸಿಂಗ್ ಅವರ ನಾಲ್ಕೂವರೆ ವರ್ಷಗಳ ಅವಧಿಯ ದುರಾಡಳಿತವೇ ಕಾರಣ ಎಂದೂ ಪಕ್ಷಆರೋಪಿಸಿದೆ. ಬಹುತೇಕ ಮುಂದಿನ ವಾರ ನಡೆಯಲಿರುವ ಸಿಡಬ್ಲ್ಯೂಸಿ ಸಭೆಯಲ್ಲಿ ಈ ಎಲ್ಲ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಆಂತರಿಕ ಕಚ್ಚಾಟ ಹಾಗೂ ನಾಯಕತ್ವದ ಕೊರತೆ ಸೋಲಿಗೆ ಪ್ರಮುಖ ಕಾರಣ ಎಂಬುದನ್ನು ಮನಗಂಡಿರುವ ಪಕ್ಷದ ವರಿಷ್ಠರು, ಚುನಾವಣಾ ಪ್ರಚಾರದ ಸಂದರ್ಭ ಆಂತರಿಕ ಭಿನ್ನಾಭಿಪ್ರಾಯ ಹೊರಹಾಕಿದ್ದ ನವಜೋತ್‌ ಸಿಂಗ್‌ ಸಿಧು ಅವರಿಂದ ಸೋಲಿಗೆ ಕಾರಣವಾದ ಸೂಕ್ಷ್ಮ ಅಂಶಗಳ ಕುರಿತು ವಿವರ ಪಡೆಯಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT