<p><strong>ನವದೆಹಲಿ: </strong>ಉತ್ತರ ಪ್ರದೇಶದ ಗೊಂಡಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭಾಷಣದ ಮಧ್ಯೆ, ಉದ್ಯೋಗ ನೀಡುವಂತೆ ಯುವಕರು ದನಿ ಎತ್ತಿದ ಘಟನೆ ನಡೆದಿದೆ ಎಂದು ‘ಎನ್ಡಿಟಿವಿ’ ವರದಿ ಮಾಡಿದೆ.</p>.<p>ಭಾರತೀಯ ಸೇನೆಯಲ್ಲಿ ಉದ್ಯೋಗ ಕಲ್ಪಿಸುವಂತೆ ಯುವಕರು ಘೋಷಣೆ ಕೂಗಿದರು. ಅವರನ್ನು ಸಮಾಧಾನಪಡಿಸಿದ ರಾಜನಾಥ್, ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು.</p>.<p>‘ಸೇನಾ ನೇಮಕಾತಿಯನ್ನು ಆರಂಭಿಸಿ’, ‘ನಮ್ಮ ಬೇಡಿಕೆಯನ್ನು ಈಡೇರಿಸಿ’ ಎಂಬ ಘೋಷಣೆಗಳು ಸಭಿಕರ ಸಾಲಿನಿಂದ ಕೇಳಿಬಂದವು. ‘ಚಿಂತಿಸಬೇಡಿ. ನೇಮಕಾತಿ ನಡೆಯತ್ತದೆ. ಕೊರೊನಾ ಕಾರಣದಿಂದ ಕೆಲವು ಅಡ್ಡಿಗಳು ಎದುರಾಗಿದ್ದವು’ ಎಂದು ರಾಜನಾಥ್ ವಿವರಿಸಿದರು. ಈ ಮಾತಿಗೆ ಸಮಾಧಾನಗೊಂಡ ಯುಕವರು, ‘ಭಾರತ್ ಮಾತಾಕಿ ಜೈ’ ಘೋಷಣೆ ಕೂಗಿ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.</p>.<p>‘ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಪ್ರತೀ ವರ್ಷದ ಹೋಳಿ ಹಾಗೂ ದೀಪಾವಳಿ ಹಬ್ಬಗಳಿಗೆ ಎರಡು ಉಚಿತ ಎಲ್ಪಿಜಿ ಸಿಲಿಂಡರ್ ನೀಡುತ್ತೇವೆ’ ಎಂದು ರಾಜನಾಥ್ ಜನರಿಗೆ ಭರವಸೆ ನೀಡಿದರು.</p>.<p>ತಮ್ಮ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ರಂಗದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿಯಾಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಟ್ವೀಟ್ ಮಾಡಿದ್ದರು. ಅವರ ಈ ಮಾತು ತೀವ್ರ ಟೀಕೆಗೆ ಗುರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಉತ್ತರ ಪ್ರದೇಶದ ಗೊಂಡಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭಾಷಣದ ಮಧ್ಯೆ, ಉದ್ಯೋಗ ನೀಡುವಂತೆ ಯುವಕರು ದನಿ ಎತ್ತಿದ ಘಟನೆ ನಡೆದಿದೆ ಎಂದು ‘ಎನ್ಡಿಟಿವಿ’ ವರದಿ ಮಾಡಿದೆ.</p>.<p>ಭಾರತೀಯ ಸೇನೆಯಲ್ಲಿ ಉದ್ಯೋಗ ಕಲ್ಪಿಸುವಂತೆ ಯುವಕರು ಘೋಷಣೆ ಕೂಗಿದರು. ಅವರನ್ನು ಸಮಾಧಾನಪಡಿಸಿದ ರಾಜನಾಥ್, ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು.</p>.<p>‘ಸೇನಾ ನೇಮಕಾತಿಯನ್ನು ಆರಂಭಿಸಿ’, ‘ನಮ್ಮ ಬೇಡಿಕೆಯನ್ನು ಈಡೇರಿಸಿ’ ಎಂಬ ಘೋಷಣೆಗಳು ಸಭಿಕರ ಸಾಲಿನಿಂದ ಕೇಳಿಬಂದವು. ‘ಚಿಂತಿಸಬೇಡಿ. ನೇಮಕಾತಿ ನಡೆಯತ್ತದೆ. ಕೊರೊನಾ ಕಾರಣದಿಂದ ಕೆಲವು ಅಡ್ಡಿಗಳು ಎದುರಾಗಿದ್ದವು’ ಎಂದು ರಾಜನಾಥ್ ವಿವರಿಸಿದರು. ಈ ಮಾತಿಗೆ ಸಮಾಧಾನಗೊಂಡ ಯುಕವರು, ‘ಭಾರತ್ ಮಾತಾಕಿ ಜೈ’ ಘೋಷಣೆ ಕೂಗಿ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.</p>.<p>‘ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಪ್ರತೀ ವರ್ಷದ ಹೋಳಿ ಹಾಗೂ ದೀಪಾವಳಿ ಹಬ್ಬಗಳಿಗೆ ಎರಡು ಉಚಿತ ಎಲ್ಪಿಜಿ ಸಿಲಿಂಡರ್ ನೀಡುತ್ತೇವೆ’ ಎಂದು ರಾಜನಾಥ್ ಜನರಿಗೆ ಭರವಸೆ ನೀಡಿದರು.</p>.<p>ತಮ್ಮ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ರಂಗದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿಯಾಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಟ್ವೀಟ್ ಮಾಡಿದ್ದರು. ಅವರ ಈ ಮಾತು ತೀವ್ರ ಟೀಕೆಗೆ ಗುರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>