‘ಸೇನಾ ನೇಮಕಾತಿಯನ್ನು ಆರಂಭಿಸಿ’, ‘ನಮ್ಮ ಬೇಡಿಕೆಯನ್ನು ಈಡೇರಿಸಿ’ ಎಂಬ ಘೋಷಣೆಗಳು ಸಭಿಕರ ಸಾಲಿನಿಂದ ಕೇಳಿಬಂದವು. ‘ಚಿಂತಿಸಬೇಡಿ. ನೇಮಕಾತಿ ನಡೆಯತ್ತದೆ. ಕೊರೊನಾ ಕಾರಣದಿಂದ ಕೆಲವು ಅಡ್ಡಿಗಳು ಎದುರಾಗಿದ್ದವು’ ಎಂದು ರಾಜನಾಥ್ ವಿವರಿಸಿದರು. ಈ ಮಾತಿಗೆ ಸಮಾಧಾನಗೊಂಡ ಯುಕವರು, ‘ಭಾರತ್ ಮಾತಾಕಿ ಜೈ’ ಘೋಷಣೆ ಕೂಗಿ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.