‘ಪ್ರಧಾನಿ ಮೋದಿ ಮತ್ತು ಅವರ ಸಹೋದ್ಯೋಗಿಗಳು 'ಗರಿಷ್ಠ ಆಡಳಿತ, ಕನಿಷ್ಠ ಸರ್ಕಾರ' ಎಂಬ ಅವರ ಘೋಷಣೆಯಿಂದ ನಿಜವಾಗಿಯೂ ಏನನ್ನು ಅರ್ಥೈಸುತ್ತಿದ್ದಾರೆ ಎಂಬುದು ನೋವಿನಿಂದ ಸ್ಪಷ್ಟವಾಗಿದೆ. ಇದರರ್ಥ ದೇಶವನ್ನು ಶಾಶ್ವತ ಧ್ರುವೀಕರಣದ ಸ್ಥಿತಿಯಲ್ಲಿ ಇರಿಸುವುದು, ಜನರನ್ನು ನಿರಂತರವಾಗಿ ಭಯ ಮತ್ತು ಅಭದ್ರತೆಯಲ್ಲಿ ಬದುಕುವಂತೆ ಮಾಡುವುದೇ ಆಗಿದೆ. ನಮ್ಮ ಸಮಾಜದ ಅವಿಭಾಜ್ಯ ಅಂಗವಾಗಿರುವ ಮತ್ತು ನಮ್ಮ ಗಣರಾಜ್ಯದ ಸಮಾನ ನಾಗರಿಕರಾಗಿರುವ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುವುದು, ಬಲಿಪಶುಗಳನ್ನಾಗಿ ಮಾಡುವುದು ಹಾಗೂ ಆಗಾಗ್ಗೆ ಅವರ ವಿರುದ್ಧ ಕ್ರೂರವಾಗಿ ವರ್ತಿಸುವುದು ಬಿಜೆಪಿ ನಾಯಕರ ಮಾತಿನ ಅರ್ಥವಾಗಿದೆ’ಎಂದು ಅವರು ಹೇಳಿದ್ದಾರೆ.