ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರ: ಕೋವಿಡ್ ಕೇರ್ ಕೇಂದ್ರದಿಂದ ಕನಿಷ್ಠ 25 ಸೋಂಕಿತರು ಪರಾರಿ

Last Updated 12 ಮೇ 2021, 10:57 IST
ಅಕ್ಷರ ಗಾತ್ರ

ಅಗರ್ತಲ: ಕೋವಿಡ್ ಕೇರ್ ಕೇಂದ್ರದಿಂದಕನಿಷ್ಠ 25 ಮಂದಿ ಸೋಂಕಿತರು ಪರಾರಿಯಾದ ಘಟನೆ ತ್ರಿಪುರಾದ ಅಂಬಸ್ಸದಲ್ಲಿ ನಡೆದಿದೆ. ಪರಾರಿಯಾದವರಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು ಏಳು ಮಂದಿಯನ್ನು ರೈಲು ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಬಸ್ಸದ ಪಂಚಾಯತ್ ರಾಜ್ ತರಬೇತಿ ಸಂಸ್ಥೆಯ ಕಟ್ಟಡದಲ್ಲಿರುವ ಕೇಂದ್ರದಿಂದ ಸೋಮವಾರ ರಾತ್ರಿ ಸೋಂಕಿತರು ಪರಾರಿಯಾಗಿದ್ದಾರೆ. ಇವರೆಲ್ಲ ಇತರ ರಾಜ್ಯಗಳಿಂದ ಬಂದಿರುವ ವಲಸೆ ಕಾರ್ಮಿಕರು ಎಂದು ಅಂಬಸ್ಸ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಹಿಮಾದ್ರಿ ಸರ್ಕಾರ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಎಲ್ಲ ಪೊಲೀಸ್ ಠಾಣೆಗಳಿಗೆ ಮತ್ತು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವ ಪ್ರಕಾರ, 18 ಮಂದಿ ಸೋಂಕಿತರು ಇತರ ರಾಜ್ಯಗಳಿಗೆ ತೆರಳಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 22ರಂದು ಅಗರ್ತಲದಿಂದ 31 ಮಂದಿ ಕೋವಿಡ್ ಸೋಂಕಿತರು ಪರಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT