ಈ ನಡುವೆ ಉದ್ಧವ್ ಅವರನ್ನು ಗುರಿಯಾಗಿಸಿಕೊಂಡು, ‘ಮಹಾರಾಷ್ಟ್ರದ ಮುಖ್ಯಮಂತ್ರಿ ಕೇವಲ ಮೂರು ಗಂಟೆಗಳಲ್ಲೇ ನೆರೆಪೀಡಿತ ಪ್ರದೇಶ ಸಮೀಕ್ಷೆ ನಡೆಸಿ, ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ ‘ಕೇವಲ ಮೂರು ಗಂಟೆಗಳ ಅವಧಿಯಲ್ಲಿ ಮುಖ್ಯಮಂತ್ರಿ ಅವರು ನೆರೆಪೀಡಿತ ಪ್ರದೇಶಗಳ ಕಷ್ಟವನ್ನು ಹೇಗೆ ಅರ್ಥ ಮಾಡಿಕೊಂಡರು’ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಪ್ರವೀಣ್ ದಾರೇಕರ್ ಅವರು ಪ್ರಶ್ನಿಸಿದ್ದರು.