<p><strong>ಅಲಹಾಬಾದ್:</strong> ಪಂಚಾಯಿತಿ ಚುನಾವಣೆ ವೇಳೆ ಕೋವಿಡ್ನಿಂದ ಮೃತಪಟ್ಟ ಚುನಾವಣಾ ಅಧಿಕಾರಿಗಳ ಕುಟುಂಬಗಳಿಗೆ ನೀಡಲಾಗುವ ಪರಿಹಾರಧನದ ಮೊತ್ತವನ್ನು ಮರುಪರಿಶೀಲಿಸಬೇಕು, ಈ ಮೊತ್ತ ಕನಿಷ್ಠ ₹ 1 ಕೋಟಿಯಷ್ಟಾದರೂ ಇರಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.</p>.<p>ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಕ್ವಾರಂಟೈನ್ ಕೇಂದ್ರಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ಅದರ ವಿಚಾರಣೆ ವೇಳೆ ನ್ಯಾಯಾಲಯ ಈ ವಿಷಯ ತಿಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಸಿದ್ದಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅವರ ಪೀಠವು,‘ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗವು ಆರ್ಟಿ-ಪಿಸಿಆರ್ ಪರೀಕ್ಷೆ ಇಲ್ಲದೆ ಚುನಾವಣಾ ಅಧಿಕಾರಿಗಳನ್ನು ಕಾರ್ಯನಿರ್ವಹಿಸುವಂತೆ ಮಾಡಿದೆ. ಹಾಗಾಗಿ ಕರ್ತವ್ಯ ನಿರತರಾಗಿದ್ದಾಗ ಕೋವಿಡ್ನಿಂದ ಮೃತಪಟ್ಟ ಚುನಾವಣಾ ಅಧಿಕಾರಿಗಳ ಕುಟುಂದವರಿಗೆ ಕನಿಷ್ಠ ₹1 ಕೋಟಿಯಷ್ಟು ಪರಿಹಾರ ಧನ ನೀಡಬೇಕು. ಹಾಗಾಗಿ ಮುಂದಿನ ವಿಚಾರಣೆ ವೇಳೆ ಪರಿಹಾರ ಧನದ ಪರಿಷ್ಕೃತ ಮೊತ್ತವನ್ನು ತಿಳಿಸಿ’ ಎಂದು ಸೂಚಿಸಿದೆ.</p>.<p>ಇದೇ ವೇಳೆ ಮೀರತ್ ಆಸ್ಪತ್ರೆಯಲ್ಲಿ ಮೃತಪಟ್ಟ 20 ರೋಗಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೀಠವು, ‘ಕೋವಿಡ್ 19 ಶಂಕಿತ ರೋಗಿಗಳ ಸಾವನ್ನು ಕೋವಿಡ್ ಸಾವು ಎಂದೇ ಪರಿಗಣಿಸಬೇಕು. ಎಲ್ಲಾ ಆಸ್ಪತ್ರೆಗಳು ಈ ಆದೇಶವನ್ನು ಪಾಲಿಸಬೇಕು’ ಎಂದು ನ್ಯಾಯಾಲವು ಹೇಳಿದೆ.</p>.<p>ಈ ಸಾವಿನ ಬಗ್ಗೆ ಸ್ಪಷ್ಟ ವರದಿಯನ್ನು ಸಲ್ಲಿಸುವಂತೆ ಮೀರತ್ನ ವೈದ್ಯಕೀಯ ಕಾಲೇಜಿಗೆ ನ್ಯಾಯಾಲಯವು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಹಾಬಾದ್:</strong> ಪಂಚಾಯಿತಿ ಚುನಾವಣೆ ವೇಳೆ ಕೋವಿಡ್ನಿಂದ ಮೃತಪಟ್ಟ ಚುನಾವಣಾ ಅಧಿಕಾರಿಗಳ ಕುಟುಂಬಗಳಿಗೆ ನೀಡಲಾಗುವ ಪರಿಹಾರಧನದ ಮೊತ್ತವನ್ನು ಮರುಪರಿಶೀಲಿಸಬೇಕು, ಈ ಮೊತ್ತ ಕನಿಷ್ಠ ₹ 1 ಕೋಟಿಯಷ್ಟಾದರೂ ಇರಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.</p>.<p>ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಕ್ವಾರಂಟೈನ್ ಕೇಂದ್ರಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ಅದರ ವಿಚಾರಣೆ ವೇಳೆ ನ್ಯಾಯಾಲಯ ಈ ವಿಷಯ ತಿಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಸಿದ್ದಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅವರ ಪೀಠವು,‘ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗವು ಆರ್ಟಿ-ಪಿಸಿಆರ್ ಪರೀಕ್ಷೆ ಇಲ್ಲದೆ ಚುನಾವಣಾ ಅಧಿಕಾರಿಗಳನ್ನು ಕಾರ್ಯನಿರ್ವಹಿಸುವಂತೆ ಮಾಡಿದೆ. ಹಾಗಾಗಿ ಕರ್ತವ್ಯ ನಿರತರಾಗಿದ್ದಾಗ ಕೋವಿಡ್ನಿಂದ ಮೃತಪಟ್ಟ ಚುನಾವಣಾ ಅಧಿಕಾರಿಗಳ ಕುಟುಂದವರಿಗೆ ಕನಿಷ್ಠ ₹1 ಕೋಟಿಯಷ್ಟು ಪರಿಹಾರ ಧನ ನೀಡಬೇಕು. ಹಾಗಾಗಿ ಮುಂದಿನ ವಿಚಾರಣೆ ವೇಳೆ ಪರಿಹಾರ ಧನದ ಪರಿಷ್ಕೃತ ಮೊತ್ತವನ್ನು ತಿಳಿಸಿ’ ಎಂದು ಸೂಚಿಸಿದೆ.</p>.<p>ಇದೇ ವೇಳೆ ಮೀರತ್ ಆಸ್ಪತ್ರೆಯಲ್ಲಿ ಮೃತಪಟ್ಟ 20 ರೋಗಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೀಠವು, ‘ಕೋವಿಡ್ 19 ಶಂಕಿತ ರೋಗಿಗಳ ಸಾವನ್ನು ಕೋವಿಡ್ ಸಾವು ಎಂದೇ ಪರಿಗಣಿಸಬೇಕು. ಎಲ್ಲಾ ಆಸ್ಪತ್ರೆಗಳು ಈ ಆದೇಶವನ್ನು ಪಾಲಿಸಬೇಕು’ ಎಂದು ನ್ಯಾಯಾಲವು ಹೇಳಿದೆ.</p>.<p>ಈ ಸಾವಿನ ಬಗ್ಗೆ ಸ್ಪಷ್ಟ ವರದಿಯನ್ನು ಸಲ್ಲಿಸುವಂತೆ ಮೀರತ್ನ ವೈದ್ಯಕೀಯ ಕಾಲೇಜಿಗೆ ನ್ಯಾಯಾಲಯವು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>