ನ್ಯಾಯಮೂರ್ತಿಗಳಾದ ಸಿದ್ದಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅವರ ಪೀಠವು,‘ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗವು ಆರ್ಟಿ-ಪಿಸಿಆರ್ ಪರೀಕ್ಷೆ ಇಲ್ಲದೆ ಚುನಾವಣಾ ಅಧಿಕಾರಿಗಳನ್ನು ಕಾರ್ಯನಿರ್ವಹಿಸುವಂತೆ ಮಾಡಿದೆ. ಹಾಗಾಗಿ ಕರ್ತವ್ಯ ನಿರತರಾಗಿದ್ದಾಗ ಕೋವಿಡ್ನಿಂದ ಮೃತಪಟ್ಟ ಚುನಾವಣಾ ಅಧಿಕಾರಿಗಳ ಕುಟುಂದವರಿಗೆ ಕನಿಷ್ಠ ₹1 ಕೋಟಿಯಷ್ಟು ಪರಿಹಾರ ಧನ ನೀಡಬೇಕು. ಹಾಗಾಗಿ ಮುಂದಿನ ವಿಚಾರಣೆ ವೇಳೆ ಪರಿಹಾರ ಧನದ ಪರಿಷ್ಕೃತ ಮೊತ್ತವನ್ನು ತಿಳಿಸಿ’ ಎಂದು ಸೂಚಿಸಿದೆ.