ಪ್ರಾಥಮಿಕ ವರದಿಗಳ ಪ್ರಕಾರ, ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಮಳಿಗೆ ಮಾತ್ರವಲ್ಲದೆ, ಬೆಂಕಿ ಮೊದಲ ಮಹಡಿಯ ಮಾಲೀಕರ ಮನೆಗೂ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಲಾ ₹2 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.