<p><strong>ಜೈಪುರ:</strong> ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದ್ದು, ಕೋಮು ಸೌಹಾರ್ದತೆ ಕದಡುವ ಮೂಲಕ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.</p>.<p>ಗುರುವಾರದಂದು 2.8 ಕಿ.ಮೀ. ಎತ್ತರದ 'ಭಾರತ್ ಜೋಡೊ ಸೇತು' ರಸ್ತೆ ಉದ್ಘಾಟಿಸಿ ಮಾತನಾಡಿದ ಅವರು, ಈ ಹೆಸರು ಶಾಂತಿಯ ಸಂದೇಶವನ್ನು ರವಾನಿಸಲಿದೆ. ದೇಶದಲ್ಲಿ ಆತಂಕಕಾರಿ ಪರಿಸ್ಥಿತಿಯಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಕೋಮು ಸೌಹಾರ್ದತೆ ಕದಡಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ್ ಜೋಡೊ ಸೇತು ಎಂದು ಕರೆಯುವುದು ಧನಾತ್ಮಕ ಸಂದೇಶವನ್ನು ನೀಡಲಿದೆ ಎಂದು ಹೇಳಿದರು.</p>.<p>ದ್ವೇಷವನ್ನು ಕೊನೆಗೊಳಿಸಿ ಭಾತೃತ್ವದ ಸಂದೇಶ ರವಾನಿಸುವುದು ಭಾರತ್ ಜೋಡೊ ಯಾತ್ರೆಯ ಉದ್ದೇಶವಾಗಿದೆ. ಇದರ ನೆನಪಿಗಾಗಿ ಭಾರತ್ ಜೋಡೊ ಸೇತು ಎಂದು ಹೆಸರಿಸಲಾಗಿದೆ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೆಪ್ಟೆಂಬರ್ 7ರಂದು ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ, 150 ದಿನಗಳ ಪರ್ಯಂತ 3,570 ಕಿ.ಮೀ. ಕ್ರಮಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ.</p>.<p>ಅಂದ ಹಾಗೆ ₹250 ಕೋಟಿ ವೆಚ್ಚದಲ್ಲಿ ಭಾರತ್ ಜೋಡೊ ಸೇತು ರಸ್ತೆ ನಿರ್ಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದ್ದು, ಕೋಮು ಸೌಹಾರ್ದತೆ ಕದಡುವ ಮೂಲಕ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.</p>.<p>ಗುರುವಾರದಂದು 2.8 ಕಿ.ಮೀ. ಎತ್ತರದ 'ಭಾರತ್ ಜೋಡೊ ಸೇತು' ರಸ್ತೆ ಉದ್ಘಾಟಿಸಿ ಮಾತನಾಡಿದ ಅವರು, ಈ ಹೆಸರು ಶಾಂತಿಯ ಸಂದೇಶವನ್ನು ರವಾನಿಸಲಿದೆ. ದೇಶದಲ್ಲಿ ಆತಂಕಕಾರಿ ಪರಿಸ್ಥಿತಿಯಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಕೋಮು ಸೌಹಾರ್ದತೆ ಕದಡಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ್ ಜೋಡೊ ಸೇತು ಎಂದು ಕರೆಯುವುದು ಧನಾತ್ಮಕ ಸಂದೇಶವನ್ನು ನೀಡಲಿದೆ ಎಂದು ಹೇಳಿದರು.</p>.<p>ದ್ವೇಷವನ್ನು ಕೊನೆಗೊಳಿಸಿ ಭಾತೃತ್ವದ ಸಂದೇಶ ರವಾನಿಸುವುದು ಭಾರತ್ ಜೋಡೊ ಯಾತ್ರೆಯ ಉದ್ದೇಶವಾಗಿದೆ. ಇದರ ನೆನಪಿಗಾಗಿ ಭಾರತ್ ಜೋಡೊ ಸೇತು ಎಂದು ಹೆಸರಿಸಲಾಗಿದೆ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೆಪ್ಟೆಂಬರ್ 7ರಂದು ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ, 150 ದಿನಗಳ ಪರ್ಯಂತ 3,570 ಕಿ.ಮೀ. ಕ್ರಮಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ.</p>.<p>ಅಂದ ಹಾಗೆ ₹250 ಕೋಟಿ ವೆಚ್ಚದಲ್ಲಿ ಭಾರತ್ ಜೋಡೊ ಸೇತು ರಸ್ತೆ ನಿರ್ಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>