ಲಖನೌ: ‘ಕೃಷಿ ತ್ಯಾಜ್ಯ ಸುಡುವ ರೈತರ ವಿರುದ್ಧ ಕ್ರಮಕೈಗೊಳ್ಳುವ ನೆಪದಲ್ಲಿ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ‘ ಎಂದು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ಕೃಷಿ ತ್ಯಾಜ್ಯ ಸುಡುವ ರೈತರ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಈ ಪ್ರಕ್ರಿಯೆಯಿಂದ ಉಂಟಾಗುವ ವಾಯುಮಾಲಿನ್ಯ ಕುರಿತು ರೈತರಲ್ಲಿ ಅರಿವು ಮೂಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅವರು ಮನವಿ ಮಾಡಿದ್ದಾರೆ.
ಕೃಷಿ ತ್ಯಾಜ್ಯಗಳ ಸುಡುವ ವಿಚಾರದಲ್ಲಿ ರೈತರಿಗೆ ವಿನಾಕಾರಣ ತೊಂದರೆ ಕೊಡುವುದಾಗಲಿ, ಕಿರುಕುಳು ಕೊಡುವುದಾಗಲಿ ಮಾಡಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನದ ನೀಡಿದ ಒಂದು ದಿನದ ನಂತರ ಮಾಯಾವತಿ ಟ್ವೀಟ್ ಮಾಡಿದ್ದಾರೆ.