ಬಿಜೆಪಿ ಕಾರ್ಯಕರ್ತರ ದಾಳಿಯಲ್ಲಿ ಗಾಯಗೊಂಡವರನ್ನು ಸೇರಿದಂತೆ, ಕನಿಷ್ಠ 14 ಟಿಎಂಸಿ ನಾಯಕರು, ಕಾರ್ಯಕರ್ತರನ್ನು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ತ್ರಿಪುರದ ಖೊವಾಯಿ ಜಿಲ್ಲೆಯಲ್ಲಿ ಆಗಸ್ಟ್ 8 ರಂದು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಗುಟುರು ಹಾಕಿದ್ದಾರೆ.
ತ್ರಿಪುರ ವಿಧಾನಸಭೆಗೆ 2023ರಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ. ಆದರೂ ಟಿಎಂಸಿ ನಾಯಕರು ತ್ರಿಪುರಕ್ಕೆ ಭೇಟಿ ನೀಡುವ ಪ್ರಮಾಣ ಕಡಿಮೆ. ಈ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ, ಬಿಜೆಪಿಗೆ ನಿಷ್ಠರಾದ ಸುಮಾರು 2 ಲಕ್ಷ ಜನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹೊರ ರಾಜ್ಯ, ಹೊರ ದೇಶಗಳಿಂದ ಬಂದಿದ್ದರು. ಬಿಜೆಪಿ ಆಡಳಿತವಿರುವ ತ್ರಿಪುರಕ್ಕೆ ಹೋಗಲು ಟಿಎಂಸಿ ನಾಯಕರಿಗೆ ಏಕೆ ಆಗುತ್ತಿಲ್ಲ ಎಂದು ಮಮತಾ ಆಶ್ಚರ್ಯ ವ್ಯಕ್ತಪಡಿಸಿದರು.