ಸುಖ್ಬೀರ್ ಸಿಂಗ್ ಬಾದಲ್ ವಾಹನದ ಮೇಲೆ ದಾಳಿ: ಕಾಂಗ್ರೆಸ್ ಕೃತ್ಯ ಎಂದ ಅಕಾಲಿದಳ

ಚಂಡೀಗಡ: ಶಿರೋಮಣಿ ಅಕಾಲಿದಳದ (ಎಸ್ಎಡಿ) ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಪಂಜಾಬ್ನ ಜಲಾಲಾಬಾದ್ನಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದಾಳಿ ಹಿಂದೆ ಪೊಲೀಸ್ ಬೆಂಬಲಿತ ಕಾಂಗ್ರೆಸ್ ಗೂಂಡಾಗಳ ಕೈವಾಡವಿದೆ. ಗೂಂಡಾಗಳು ಬಾದಲ್ ಹತ್ಯೆಗೆ ಸಂಚುಹೂಡಿದ್ದಾರೆ ಎಂದು ಎಸ್ಎಡಿ ಆರೋಪಿಸಿರುವುದಾಗಿ ‘ಎಎನ್ಐ’ ಟ್ವೀಟ್ ಮಾಡಿದೆ.
ಓದಿ: ರೈತರ ಪ್ರತಿಭಟನೆ: ಪಂಜಾಬ್ ಸಿಎಂ ಕರೆದ ಸರ್ವಪಕ್ಷಗಳ ಸಭೆಗೆ ಹಾಜರಾಗದ ಬಿಜೆಪಿ
ದಾಳಿ ವೇಳೆ ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ವೇಳೆ, ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದೂ ಪಕ್ಷ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.