‘ಸಚಿವರ ಮೇಲೆ ಬುಧವಾರ ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿರುವುದರ ಹಿಂದೆ ಬಹುದೊಡ್ಡ ಪಿತೂರಿಯಿದೆ. ನನ್ನ ಸಚಿವ ಸಂಪುಟದ ಸದಸ್ಯರನ್ನು ಕೊಲ್ಲಲು ನಡೆದ ದೊಡ್ಡ ಪಿತೂರಿ ಇದಾಗಿತ್ತು. ಜಾಕೀರ್ ಅವರನ್ನು ಕೆಲವರು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಕೆಲವು ತಿಂಗಳುಗಳಿಂದ ಒತ್ತಡ ಹೇರುತ್ತಿದ್ದರು. ಈಗ ತನಿಖೆ ನಡೆಯುತ್ತಿದೆ, ತನಿಖೆ ಮುಗಿಯುವರೆಗೂ ಅದನ್ನು ಬಹಿರಂಗಪಡಿಸುವುದಿಲ್ಲ’ ಎಂದು ಮಮತಾ ಬ್ಯಾನರ್ಜಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.