<p><strong>ನವದೆಹಲಿ: </strong>ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಜಾಮೀನು ಅರ್ಜಿಯನ್ನು ಸ್ವೀಕರಿಸಿದ್ದಕ್ಕಾಗಿ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸೇರಿದಂತೆ ಸುಪ್ರೀಂಕೋರ್ಟ್ ಮತ್ತು ಅದರ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ 'ಸ್ಟ್ಯಾಂಡ್-ಅಪ್' ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಗುರುವಾರ ಒಪ್ಪಿಗೆ ನೀಡಿದ್ದಾರೆ.</p>.<p>ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಹಲವಾರು ಮನವಿಗಳು ಬಂದಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ವೇಣುಗೋಪಾಲ್, ಕಾಮ್ರಾ ಅವರ ಟ್ವೀಟ್ಗಳು ಆಕ್ಷೇಪಾರ್ಹ ಮತ್ತು ಕೆಟ್ಟ ಅಭಿರುಚಿಯದ್ದು. ಕಾಮ್ರಾ ನ್ಯಾಯಾಂಗ ನಿಂದನೆ ಮತ್ತು ತಮಾಷೆ ನಡುವಿನ ರೇಖೆಯನ್ನು ಮೀರಿದ್ದಾರೆಎಂದು ಹೇಳಿದ್ದಾರೆ.</p>.<p>ಈಗಿನ ಜನರು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸುಪ್ರೀಂಕೋರ್ಟ್ ಮತ್ತು ಅದರ ನ್ಯಾಯಾಧೀಶರನ್ನು ಧೈರ್ಯವಾಗಿ ಮತ್ತು ನಾಚಿಕೆ ಬಿಟ್ಟು ಖಂಡಿಸಬಹುದು ಎಂದು ನಂಬಿದ್ದಾರೆ. ಆದರೆ ಈ ರೀತಿಯ ಕೃತ್ಯಗಳು 1972 ನ್ಯಾಯಾಂಗ ನಿಂದನೆ ಕಾಯ್ದೆಯಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದಿದ್ದಾರೆ ವೇಣುಗೋಪಾಲ್.</p>.<p>ಬುಧವಾರ ಮಧ್ಯಾಹ್ನ ಟ್ವೀಟ್ ಮಾಡಿದ ಕಾಮ್ರಾ ಹಲವು ವರ್ಷಗಳ ಹಿಂದೆಯೇ ಗೌರವವು ಈ ಕಟ್ಟಡವನ್ನು(ಸುಪ್ರೀಂಕೋರ್ಟ್)ಬಿಟ್ಟು ಹೋಗಿದೆ ಎಂದಿದ್ದರು. ಇನ್ನೊಂದು ಟ್ವೀಟ್ನಲ್ಲಿ ಸುಪ್ರೀಂಕೋರ್ಟ್ ಚಿತ್ರ ಶೇರ್ ಮಾಡಿ ದೇಶದ ಅತಿ ದೊಡ್ಡ ತಮಾಷೆ ಎಂದು ಬರೆದಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಜಾಮೀನು ಅರ್ಜಿಯನ್ನು ಸ್ವೀಕರಿಸಿದ್ದಕ್ಕಾಗಿ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸೇರಿದಂತೆ ಸುಪ್ರೀಂಕೋರ್ಟ್ ಮತ್ತು ಅದರ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ 'ಸ್ಟ್ಯಾಂಡ್-ಅಪ್' ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಗುರುವಾರ ಒಪ್ಪಿಗೆ ನೀಡಿದ್ದಾರೆ.</p>.<p>ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಹಲವಾರು ಮನವಿಗಳು ಬಂದಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ವೇಣುಗೋಪಾಲ್, ಕಾಮ್ರಾ ಅವರ ಟ್ವೀಟ್ಗಳು ಆಕ್ಷೇಪಾರ್ಹ ಮತ್ತು ಕೆಟ್ಟ ಅಭಿರುಚಿಯದ್ದು. ಕಾಮ್ರಾ ನ್ಯಾಯಾಂಗ ನಿಂದನೆ ಮತ್ತು ತಮಾಷೆ ನಡುವಿನ ರೇಖೆಯನ್ನು ಮೀರಿದ್ದಾರೆಎಂದು ಹೇಳಿದ್ದಾರೆ.</p>.<p>ಈಗಿನ ಜನರು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸುಪ್ರೀಂಕೋರ್ಟ್ ಮತ್ತು ಅದರ ನ್ಯಾಯಾಧೀಶರನ್ನು ಧೈರ್ಯವಾಗಿ ಮತ್ತು ನಾಚಿಕೆ ಬಿಟ್ಟು ಖಂಡಿಸಬಹುದು ಎಂದು ನಂಬಿದ್ದಾರೆ. ಆದರೆ ಈ ರೀತಿಯ ಕೃತ್ಯಗಳು 1972 ನ್ಯಾಯಾಂಗ ನಿಂದನೆ ಕಾಯ್ದೆಯಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದಿದ್ದಾರೆ ವೇಣುಗೋಪಾಲ್.</p>.<p>ಬುಧವಾರ ಮಧ್ಯಾಹ್ನ ಟ್ವೀಟ್ ಮಾಡಿದ ಕಾಮ್ರಾ ಹಲವು ವರ್ಷಗಳ ಹಿಂದೆಯೇ ಗೌರವವು ಈ ಕಟ್ಟಡವನ್ನು(ಸುಪ್ರೀಂಕೋರ್ಟ್)ಬಿಟ್ಟು ಹೋಗಿದೆ ಎಂದಿದ್ದರು. ಇನ್ನೊಂದು ಟ್ವೀಟ್ನಲ್ಲಿ ಸುಪ್ರೀಂಕೋರ್ಟ್ ಚಿತ್ರ ಶೇರ್ ಮಾಡಿ ದೇಶದ ಅತಿ ದೊಡ್ಡ ತಮಾಷೆ ಎಂದು ಬರೆದಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>