<p class="title"><strong>ಪುಣೆ: </strong>‘ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡುವುದಕ್ಕೆ ಎಲ್ಲರ ಒಪ್ಪಿಗೆಯೂ ಇದ್ದು, ಇಲ್ಲಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಿದರೆ ಈ ಕುರಿತ ನಿರ್ಣಯವನ್ನು ಅಂಗೀಕರಿಸಲಾಗುವುದು’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ಸೋಮವಾರ ಆಶ್ವಾಸನೆ ನೀಡಿದರು.</p>.<p class="title">ಹೆಸರು ಬದಲಾವಣೆಯನ್ನು ಕಾಂಗ್ರೆಸ್ ಸತತವಾಗಿ ವಿರೋಧಿಸುತ್ತಲೇ ಬಂದಿದೆ. ಔರಂಗಾಬಾದ್ನ ಮರುನಾಮಕರಣಕ್ಕೆ ಮೊದಲಿನಿಂದಲೂ ಒತ್ತಾಯಿಸುತ್ತಿದ್ದ ಶಿವಸೇನಾ ಸರ್ಕಾರವನ್ನು ನಡೆಸುವ ಸಲುವಾಗಿ ಕಾಂಗ್ರೆಸ್ ಜೊತೆಗೆ ಮೈತ್ರಿ ಬೆಳೆಸಿದೆ ಎಂದು ಕುಟುಕಿದರು.</p>.<p class="title">ಎರಡು ದಶಕಗಳ ಹಿಂದೆಯೇ ಔರಂಗಾಬಾದ್ ಅನ್ನು ಸಂಭಾಜಿನಗರವೆಂದು ಮರುನಾಮಕರಣ ಮಾಡುವ ಬೇಡಿಕೆಯನ್ನು ಶಿವಸೇನಾ ಇರಿಸಿತ್ತು. ಈ ಸಂಬಂಧ, 1995ರಲ್ಲಿ ಔರಂಗಾಬಾದ್ ನಗರಪಾಲಿಕೆಯು ನಿರ್ಣಯವನ್ನು ಕೈಗೊಂಡಿತ್ತು. ಈ ನಿರ್ಣಯವನ್ನು ಕಾಂಗ್ರೆಸ್ ಸದಸ್ಯ ಹೈಕೋರ್ಟ್, ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪುಣೆ: </strong>‘ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡುವುದಕ್ಕೆ ಎಲ್ಲರ ಒಪ್ಪಿಗೆಯೂ ಇದ್ದು, ಇಲ್ಲಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಿದರೆ ಈ ಕುರಿತ ನಿರ್ಣಯವನ್ನು ಅಂಗೀಕರಿಸಲಾಗುವುದು’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ಸೋಮವಾರ ಆಶ್ವಾಸನೆ ನೀಡಿದರು.</p>.<p class="title">ಹೆಸರು ಬದಲಾವಣೆಯನ್ನು ಕಾಂಗ್ರೆಸ್ ಸತತವಾಗಿ ವಿರೋಧಿಸುತ್ತಲೇ ಬಂದಿದೆ. ಔರಂಗಾಬಾದ್ನ ಮರುನಾಮಕರಣಕ್ಕೆ ಮೊದಲಿನಿಂದಲೂ ಒತ್ತಾಯಿಸುತ್ತಿದ್ದ ಶಿವಸೇನಾ ಸರ್ಕಾರವನ್ನು ನಡೆಸುವ ಸಲುವಾಗಿ ಕಾಂಗ್ರೆಸ್ ಜೊತೆಗೆ ಮೈತ್ರಿ ಬೆಳೆಸಿದೆ ಎಂದು ಕುಟುಕಿದರು.</p>.<p class="title">ಎರಡು ದಶಕಗಳ ಹಿಂದೆಯೇ ಔರಂಗಾಬಾದ್ ಅನ್ನು ಸಂಭಾಜಿನಗರವೆಂದು ಮರುನಾಮಕರಣ ಮಾಡುವ ಬೇಡಿಕೆಯನ್ನು ಶಿವಸೇನಾ ಇರಿಸಿತ್ತು. ಈ ಸಂಬಂಧ, 1995ರಲ್ಲಿ ಔರಂಗಾಬಾದ್ ನಗರಪಾಲಿಕೆಯು ನಿರ್ಣಯವನ್ನು ಕೈಗೊಂಡಿತ್ತು. ಈ ನಿರ್ಣಯವನ್ನು ಕಾಂಗ್ರೆಸ್ ಸದಸ್ಯ ಹೈಕೋರ್ಟ್, ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>