ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಔರಂಗಾಬಾದ್ ಹೆಸರು ಬದಲು: ಘೋಷಣೆ

ಪುಣೆ: ‘ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡುವುದಕ್ಕೆ ಎಲ್ಲರ ಒಪ್ಪಿಗೆಯೂ ಇದ್ದು, ಇಲ್ಲಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಿದರೆ ಈ ಕುರಿತ ನಿರ್ಣಯವನ್ನು ಅಂಗೀಕರಿಸಲಾಗುವುದು’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ಸೋಮವಾರ ಆಶ್ವಾಸನೆ ನೀಡಿದರು.
ಹೆಸರು ಬದಲಾವಣೆಯನ್ನು ಕಾಂಗ್ರೆಸ್ ಸತತವಾಗಿ ವಿರೋಧಿಸುತ್ತಲೇ ಬಂದಿದೆ. ಔರಂಗಾಬಾದ್ನ ಮರುನಾಮಕರಣಕ್ಕೆ ಮೊದಲಿನಿಂದಲೂ ಒತ್ತಾಯಿಸುತ್ತಿದ್ದ ಶಿವಸೇನಾ ಸರ್ಕಾರವನ್ನು ನಡೆಸುವ ಸಲುವಾಗಿ ಕಾಂಗ್ರೆಸ್ ಜೊತೆಗೆ ಮೈತ್ರಿ ಬೆಳೆಸಿದೆ ಎಂದು ಕುಟುಕಿದರು.
ಎರಡು ದಶಕಗಳ ಹಿಂದೆಯೇ ಔರಂಗಾಬಾದ್ ಅನ್ನು ಸಂಭಾಜಿನಗರವೆಂದು ಮರುನಾಮಕರಣ ಮಾಡುವ ಬೇಡಿಕೆಯನ್ನು ಶಿವಸೇನಾ ಇರಿಸಿತ್ತು. ಈ ಸಂಬಂಧ, 1995ರಲ್ಲಿ ಔರಂಗಾಬಾದ್ ನಗರಪಾಲಿಕೆಯು ನಿರ್ಣಯವನ್ನು ಕೈಗೊಂಡಿತ್ತು. ಈ ನಿರ್ಣಯವನ್ನು ಕಾಂಗ್ರೆಸ್ ಸದಸ್ಯ ಹೈಕೋರ್ಟ್, ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.