ಅನೇಕ ಮುಸ್ಲಿಂ ರಾಷ್ಟ್ರಗಳು ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದರೆ, ನೂಪುರ್ ಶರ್ಮಾ ಬಂಧಿಸಬೇಕು ಎಂದು ಭಾರತದಲ್ಲಿ ಮುಸ್ಲಿಂ ಸಮುದಾಯದವರು ಅಲ್ಲಿಲ್ಲಿ ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಏತನ್ಮಧ್ಯೆ ಬಾಂಗ್ಲಾದೇಶದಿಂದ ಗಡಿಪಾರಾಗಿರುವ ಲೇಖಕಿ ತಸ್ಲಿಮಾ ನಸ್ರೀನ್ ಅವರು ಟ್ವೀಟ್ ಮಾಡಿ ಈ ವಿಚಾರದಲ್ಲಿ ಮುಸ್ಲಿಂ ಸಮುದಾಯದ ನಡೆಯನ್ನು ಖಂಡಿಸಿದ್ದಾರೆ.