ಕಣಿವೆ ಜಿಲ್ಲೆಯಲ್ಲಿ ರಸ್ತೆಗಳು ಕಿರಿದಾಗಿದ್ದು, ತಿರುವುಗಳಿಂದ ಕೂಡಿರುವುದರಿಂದ ಆಂಬುಲೆನ್ಸ್ಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದಾಗಿ ಆಟೋ ಆಂಬುಲೆನ್ಸ್ಗಳನ್ನು ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಾಸಿಗೆ, ವೈದ್ಯಕೀಯ ಆಮ್ಲಜನಕ ಪೂರೈಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಲು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೈಗೊಂಡಿರುವ ಕ್ರಮಗಳ ಬಳಿಕ ಕೋವಿಡ್ ಸೋಂಕು ಪ್ರಕರಣಗಳು ಇಳಿಕೆಯಾಗಿವೆ ಎಂದವರು ಹೇಳಿದ್ದಾರೆ.
ಕೋವಿಡ್ ಸೋಂಕು ಪ್ರಕರಣಗಳು ಇಳಿಮುಖವಾಗಿರುವುದನ್ನು ಪರಿಗಣಿಸಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಅಲ್ಲದೆ ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.