‘ಡಿಸೆಂಬರ್ 8ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಸತ್ಯವನ್ನೂ ಹೊರತರಲಾಗುತ್ತದೆ. ಅಲ್ಲಿಯವರೆಗೆ, ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು,’ ಎಂದು ವಾಯುಪಡೆಯ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಶುಕ್ರವಾರ ಟ್ವೀಟ್ ಮಾಡಲಾಗಿದೆ.