<p><strong>ನವದೆಹಲಿ: </strong>‘ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ಅರಿವಿದೆ. ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನೂ ರಚಿಸಲಾಗಿದೆ’ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.</p>.<p>‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣವನ್ನು ತೆಗೆದುಹಾಕಲು ಕೇಂದ್ರ ಸರ್ಕಾರ, ಗೂಗಲ್, ಫೇಸ್ಬುಕ್ ಹಾಗೂ ಟ್ವಿಟರ್ಗೆ ನಿರ್ದೇಶನ ನೀಡಬೇಕು’ ಎಂದು ಕೋರಿಆರ್ಎಸ್ಎಸ್ ಸಿದ್ಧಾಂತ ಪ್ರತಿಪಾದಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಪ್ರತಿಕ್ರಿಯೆ ನೀಡಿದೆ. </p>.<p>‘ಸಾಮಾಜಿಕ ಜಾಲತಾಣಗಳಲ್ಲಿ ಕಾನೂನುಬಾಹಿರ ವಿಷಯಗಳನ್ನು ಕೋರ್ಟ್ ಆದೇಶ ಅಥವಾ ಸರ್ಕಾರದ ಅಧಿಸೂಚನೆ ಮುಖಾಂತರ ತೆಗೆದುಹಾಕಬಹುದಾಗಿದೆ. ಅಲ್ಲದೆ, ಆಯಾ ವೆಬ್ಸೈಟ್ಗಳ ನೀತಿಯನ್ನು ಉಲ್ಲಂಘಿಸಿದರೆ, ಅವುಗಳ ಆಡಳಿತವೇ ಅಂತಹ ವಿಷಯವನ್ನು ತೆಗೆದುಹಾಕಬಹುದಾಗಿದೆ’ ಎಂದು ಸಚಿವಾಲಯವು ತಿಳಿಸಿದೆ.</p>.<p>ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಫೇಸ್ಬುಕ್ನಲ್ಲಿ ಇರುವಂಥ ‘ಬಾಯ್ಸ್ ಲಾಕರ್ ರೂಮ್’ ಎಂಬ ಗ್ರೂಪ್ ಅನ್ನು ತೆಗೆದುಹಾಕಬೇಕು ಎಂದೂ ಗೋವಿಂದಾಚಾರ್ಯ ಅವರು ವಕೀಲ ವಿರಾಗ್ ಗುಪ್ತಾ ಅವರ ಮುಖಾಂತರ ಅರ್ಜಿ ಸಲ್ಲಿಸಿದ್ದರು.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವಾಲಯ‘ಯಾವುದೇ ವೆಬ್ಸೈಟ್ ಅಥವಾ ವಿಷಯ ನಿಷೇಧಿಸಬೇಕು ಎಂದಿದ್ದಲ್ಲಿ, ಆಯಾ ರಾಜ್ಯಗಳಲ್ಲಿನ ನಿಯೋಜಿತ ಅಧಿಕಾರಿಯಿಂದಲೇ ಇಂಥ ಮನವಿ ಬರಬೇಕು. ಬದಲಾಗಿ, ವ್ಯಕ್ತಿಯೊಬ್ಬರ ಮನವಿ ಆಧರಿಸಿ ಕ್ರಮ ಕೈಗೊಳ್ಳಲಾಗದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ಅರಿವಿದೆ. ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನೂ ರಚಿಸಲಾಗಿದೆ’ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.</p>.<p>‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣವನ್ನು ತೆಗೆದುಹಾಕಲು ಕೇಂದ್ರ ಸರ್ಕಾರ, ಗೂಗಲ್, ಫೇಸ್ಬುಕ್ ಹಾಗೂ ಟ್ವಿಟರ್ಗೆ ನಿರ್ದೇಶನ ನೀಡಬೇಕು’ ಎಂದು ಕೋರಿಆರ್ಎಸ್ಎಸ್ ಸಿದ್ಧಾಂತ ಪ್ರತಿಪಾದಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಪ್ರತಿಕ್ರಿಯೆ ನೀಡಿದೆ. </p>.<p>‘ಸಾಮಾಜಿಕ ಜಾಲತಾಣಗಳಲ್ಲಿ ಕಾನೂನುಬಾಹಿರ ವಿಷಯಗಳನ್ನು ಕೋರ್ಟ್ ಆದೇಶ ಅಥವಾ ಸರ್ಕಾರದ ಅಧಿಸೂಚನೆ ಮುಖಾಂತರ ತೆಗೆದುಹಾಕಬಹುದಾಗಿದೆ. ಅಲ್ಲದೆ, ಆಯಾ ವೆಬ್ಸೈಟ್ಗಳ ನೀತಿಯನ್ನು ಉಲ್ಲಂಘಿಸಿದರೆ, ಅವುಗಳ ಆಡಳಿತವೇ ಅಂತಹ ವಿಷಯವನ್ನು ತೆಗೆದುಹಾಕಬಹುದಾಗಿದೆ’ ಎಂದು ಸಚಿವಾಲಯವು ತಿಳಿಸಿದೆ.</p>.<p>ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಫೇಸ್ಬುಕ್ನಲ್ಲಿ ಇರುವಂಥ ‘ಬಾಯ್ಸ್ ಲಾಕರ್ ರೂಮ್’ ಎಂಬ ಗ್ರೂಪ್ ಅನ್ನು ತೆಗೆದುಹಾಕಬೇಕು ಎಂದೂ ಗೋವಿಂದಾಚಾರ್ಯ ಅವರು ವಕೀಲ ವಿರಾಗ್ ಗುಪ್ತಾ ಅವರ ಮುಖಾಂತರ ಅರ್ಜಿ ಸಲ್ಲಿಸಿದ್ದರು.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವಾಲಯ‘ಯಾವುದೇ ವೆಬ್ಸೈಟ್ ಅಥವಾ ವಿಷಯ ನಿಷೇಧಿಸಬೇಕು ಎಂದಿದ್ದಲ್ಲಿ, ಆಯಾ ರಾಜ್ಯಗಳಲ್ಲಿನ ನಿಯೋಜಿತ ಅಧಿಕಾರಿಯಿಂದಲೇ ಇಂಥ ಮನವಿ ಬರಬೇಕು. ಬದಲಾಗಿ, ವ್ಯಕ್ತಿಯೊಬ್ಬರ ಮನವಿ ಆಧರಿಸಿ ಕ್ರಮ ಕೈಗೊಳ್ಳಲಾಗದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>