<p><strong>ನವದೆಹಲಿ: </strong>ಹಿರಿಯ ನಾಗರಿಕರಿಗಾಗಿ ದೆಹಲಿ ಸರ್ಕಾರ ರೂಪಿಸಿರುವ ‘ಉಚಿತ ತೀರ್ಥಯಾತ್ರೆ‘ ಯೋಜನೆಯಲ್ಲಿ ಅಯೋಧ್ಯೆಯನ್ನು ಸೇರಿಸಲು ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಕಟಿಸಿದರು.</p>.<p>ದೆಹಲಿ ಸರ್ಕಾರವು ಹಿರಿಯ ನಾಗರಿಕರಿಗಾಗಿ 'ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನೆ' ಪ್ರಕಟಿಸಿದೆ. ಈ ಯೋಜನೆಯಡಿ ಹಿರಿಯ ನಾಗರಿಕರು ಪುರಿ ಜಗನ್ನಾಥ, ರಾಮೇಶ್ವರಂ, ಶಿರಡಿ, ಮಥುರಾ, ಹರಿದ್ವಾರ, ತಿರುಪತಿ ಸೇರಿದಂತೆ ವಿವಿಧ ಯಾತ್ರಾ ಸ್ಥಳಗಳಿಗೆ ತೆರಳುವ ಪ್ರವಾಸದ ವೆಚ್ಚವನ್ನು ಸರ್ಕಾರ ಭರಿಸಲಿದೆ. ಇದೇ ಯೋಜನೆಗೆ ಈಗ ಅಯೋಧ್ಯೆಯನ್ನು ಸೇರಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.</p>.<p>ಕೇಜ್ರಿವಾಲ್ ಅವರು ಮಂಗಳವಾರವಷ್ಟೇ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದರು.</p>.<p>ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಪ್ ಪಕ್ಷ ಕಣಕ್ಕಿಳಿಯಲು ಯೋಜನೆ ರೂಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಅಯೋಧ್ಯೆಯನ್ನು ‘ತೀರ್ಥ ಯಾತ್ರಾ ಯೋಜನೆ‘ ವ್ಯಾಪ್ತಿಗೆ ತಂದಿದೆ.</p>.<p><strong>35 ಸಾವಿರ ಮಂದಿ ಯಾತ್ರೆ: </strong>ದೆಹಲಿ ಸರ್ಕಾರದ ಈ ಯೋಜನೆಯಡಿಯಲ್ಲಿ ಈಗಾಗಲೇ 35 ಸಾವಿರಕ್ಕೂ ಅಧಿಕ ಹಿರಿಯ ನಾಗರಿಕರು ಉಚಿತ ಯಾತ್ರೆ ಮುಗಿಸಿಕೊಂಡು ಬಂದಿದ್ದಾರೆ. ಕೋವಿಡ್ ಕಾರಣ ಒಂದೂವರೆ ವರ್ಷದಿಂದ ಈ ಯೋಜನೆ ಸ್ಥಗಿತಗೊಂಡಿತ್ತು. ಮತ್ತೆ ಈ ಯೋಜನೆಯ ಆರಂಭಕ್ಕೆ ಸೂಚನೆ ನೀಡಿರುವುದರಿಂದ ಒಂದು ತಿಂಗಳೊಳಗೆ ಮತ್ತೆ ಹಿರಿಯ ನಾಗರಿಕರನ್ನು ಹೊತ್ತ ರೈಲುಗಳು ಯಾತ್ತೆಗೆ ಸಜ್ಜಾಗುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹಿರಿಯ ನಾಗರಿಕರಿಗಾಗಿ ದೆಹಲಿ ಸರ್ಕಾರ ರೂಪಿಸಿರುವ ‘ಉಚಿತ ತೀರ್ಥಯಾತ್ರೆ‘ ಯೋಜನೆಯಲ್ಲಿ ಅಯೋಧ್ಯೆಯನ್ನು ಸೇರಿಸಲು ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಕಟಿಸಿದರು.</p>.<p>ದೆಹಲಿ ಸರ್ಕಾರವು ಹಿರಿಯ ನಾಗರಿಕರಿಗಾಗಿ 'ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನೆ' ಪ್ರಕಟಿಸಿದೆ. ಈ ಯೋಜನೆಯಡಿ ಹಿರಿಯ ನಾಗರಿಕರು ಪುರಿ ಜಗನ್ನಾಥ, ರಾಮೇಶ್ವರಂ, ಶಿರಡಿ, ಮಥುರಾ, ಹರಿದ್ವಾರ, ತಿರುಪತಿ ಸೇರಿದಂತೆ ವಿವಿಧ ಯಾತ್ರಾ ಸ್ಥಳಗಳಿಗೆ ತೆರಳುವ ಪ್ರವಾಸದ ವೆಚ್ಚವನ್ನು ಸರ್ಕಾರ ಭರಿಸಲಿದೆ. ಇದೇ ಯೋಜನೆಗೆ ಈಗ ಅಯೋಧ್ಯೆಯನ್ನು ಸೇರಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.</p>.<p>ಕೇಜ್ರಿವಾಲ್ ಅವರು ಮಂಗಳವಾರವಷ್ಟೇ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದರು.</p>.<p>ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಪ್ ಪಕ್ಷ ಕಣಕ್ಕಿಳಿಯಲು ಯೋಜನೆ ರೂಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಅಯೋಧ್ಯೆಯನ್ನು ‘ತೀರ್ಥ ಯಾತ್ರಾ ಯೋಜನೆ‘ ವ್ಯಾಪ್ತಿಗೆ ತಂದಿದೆ.</p>.<p><strong>35 ಸಾವಿರ ಮಂದಿ ಯಾತ್ರೆ: </strong>ದೆಹಲಿ ಸರ್ಕಾರದ ಈ ಯೋಜನೆಯಡಿಯಲ್ಲಿ ಈಗಾಗಲೇ 35 ಸಾವಿರಕ್ಕೂ ಅಧಿಕ ಹಿರಿಯ ನಾಗರಿಕರು ಉಚಿತ ಯಾತ್ರೆ ಮುಗಿಸಿಕೊಂಡು ಬಂದಿದ್ದಾರೆ. ಕೋವಿಡ್ ಕಾರಣ ಒಂದೂವರೆ ವರ್ಷದಿಂದ ಈ ಯೋಜನೆ ಸ್ಥಗಿತಗೊಂಡಿತ್ತು. ಮತ್ತೆ ಈ ಯೋಜನೆಯ ಆರಂಭಕ್ಕೆ ಸೂಚನೆ ನೀಡಿರುವುದರಿಂದ ಒಂದು ತಿಂಗಳೊಳಗೆ ಮತ್ತೆ ಹಿರಿಯ ನಾಗರಿಕರನ್ನು ಹೊತ್ತ ರೈಲುಗಳು ಯಾತ್ತೆಗೆ ಸಜ್ಜಾಗುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>